ಮನೆ ಮನೆಗೆ ಸಂವಿಧಾನ ಜಾಗೃತಿ ಅಭಿಯಾನಕ್ಕೆ ಚಾಲನೆ

ಬೀದರ್: ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಮಹೇಶ ಗೋರನಾಳಕರ್ ಅವರು ಹಮ್ಮಿಕೊಂಡಿರುವ ಮನೆ ಮನೆಗೆ ಸಂವಿಧಾನ ಜಾಗೃತಿ ಅಭಿಯಾನಕ್ಕೆ ನಗರದಲ್ಲಿ ಚಾಲನೆ ನೀಡಲಾಯಿತು.
ಜಿಲ್ಲೆಯಾದ್ಯಂತ ಅಭಿಯಾನ ನಡೆಸಲಾಗುವುದು. ಜ.26ರ ವರೆಗೆ ಬೀದರ್ ತಾಲ್ಲೂಕಿನಲ್ಲಿ ಪಾದಯಾತ್ರೆ ಮೂಲಕ ಮೊದಲ ಹಂತದ ಅಭಿಯಾನ ನಡೆಯಲಿದೆ ಎಂದು ಮಹೇಶ ಗೋರನಾಳಕರ್ ತಿಳಿಸಿದರು.
ನರ್ಸಿಂಗ್ ಸಾಮ್ರಾಟ್, ಪವನ್ ಮಿಠಾರೆ, ಸುರೇಶ, ಸಚಿನ್ ಹೊನ್ನಿಕೇರಿ, ರಮೇಶಬಾಬು ಜಯಧ್ವನಿ, ಶಿವಾನಂದ ಸಿದ್ದಾಪುರ ಇದ್ದರು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.