ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರಕ್ಕೆ ಚಾಲನೆ

Last Updated 26 ಜನವರಿ 2022, 15:14 IST
ಅಕ್ಷರ ಗಾತ್ರ

ಜನವಾಡ: ಬೀದರ್ ತಾಲ್ಲೂಕಿನ ಕಪಲಾಪುರ (ಎ) ಗ್ರಾಮದಲ್ಲಿ ನಾಗಕರಿಕ ಸೇವಾ ಕೇಂದ್ರ ಗ್ರಾಮ ಒನ್ ಕೇಂದ್ರಕ್ಕೆ ಶಾಸಕ ಬಂಡೆಪ್ಪ ಖಾಶೆಂಪೂರ ಬುಧವಾರ ಚಾಲನೆ ನೀಡಿದರು.

ಸರ್ಕಾರಿ ಸೇವೆಗಳನ್ನು ಪಡೆಯಲು ಗ್ರಾಮೀಣ ಭಾಗದ ಜನರು ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರಗಳಿಗೆ ಹೋಗುವುದನ್ನು ತಪ್ಪಿಸಲು ಗ್ರಾಮಗಳ ಮಟ್ಟದಲ್ಲೇ ಗ್ರಾಮ ಒನ್ ಕೇಂದ್ರ ತೆರೆಯಲಾಗಿದೆ. ಈ ಕೇಂದ್ರ ಪ್ರಯೋಜನ ಪಡೆಯಬೇಕು ಎಂದು ಶಾಸಕರು ಮನವಿ ಮಾಡಿದರು.

ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಮಾತನಾಡಿ, ಗ್ರಾಮಸ್ಥರು ಆರೋಗ್ಯ ಕಾರ್ಡುಗಳನ್ನು ಪಡೆಯಬೇಕು. ಗ್ರಾಮ ಒನ್ ಸೇವಾ ಕೇಂದ್ರದ ಸದುಪಯೋಗ ಪಡೆಯಬೇಕು ಎಂದು ತಿಳಿಸಿದರು.

ಇದೆ ಸಂದರ್ಭದಲ್ಲಿ ಶಾಸಕರು ಸಾರ್ವಜನಿಕರ ಅಹವಾಲು ಆಲಿಸಿದರು. ಹಿರಿಯ ನಾಗರಿಕರಿಗೆ ಮತ್ತು ಅಂಗವಿಕಲರಿಗೆ ಪ್ರಮಾಣಪತ್ರ ವಿತರಿಸಿದರು.

ಜಿಲ್ಲಾ ಪಂಚಾಯಿಸಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಹೀರಾ ನಸೀಮ್, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT