ಕೇಂದ್ರ ಸರ್ಕಾರ ಅವೈಜ್ಞಾನಿಕವಾದ ಕಾನೂನು ಜಾರಿಗೆ ತರಲು ಹೊರಟಿದೆ. ಸಂಸತ್ತಿನಲ್ಲಿ ಒಪ್ಪಿಗೆ ಪಡೆದು, ರಾಷ್ಟ್ರಪತಿಯವರ ಅಂಕಿತಕ್ಕೆ ಕಳಿಸಲಾಗಿದೆ. ಚಾಲಕನಿಂದ ಅಪಘಾತ ಸಂಭವಿಸಿದರೆ ಗಾಯಗೊಂಡ ವ್ಯಕ್ತಿಯನ್ನು ರಸ್ತೆಯಲ್ಲಿ ಬಿಟ್ಟು ಹೋಗುವಂತಿಲ್ಲ. ಖುದ್ದು ಸ್ಥಳದಲ್ಲಿದ್ದು ಆಸ್ಪತ್ರೆಗೆ ಸಾಗಿಸಬೇಕು. ಮಹಜರು ಮಾಡುವಾಗ ಚಾಲಕ ಸ್ಥಳದಲ್ಲಿರಬೇಕು. ಇಲ್ಲವಾದಲ್ಲಿ ಚಾಲಕನಿಗೆ 10 ವರ್ಷ ಜೈಲು ಶಿಕ್ಷೆ. ₹10 ಲಕ್ಷ ದಂಡ ಹಾಕಲಾಗುತ್ತದೆ. ಅಪಘಾತ ಸಂಭವಿಸಿದ ಸ್ಥಳದಲ್ಲಿ ಚಾಲಕನಿದ್ದರೆ ಗಾಯಗೊಂಡ ವ್ಯಕ್ತಿಯ ಸಂಬಂಧಿಕರು, ಸಾರ್ವಜನಿಕರು ದಾಳಿ ನಡೆಸಬಹುದು. ಈ ರೀತಿಯ ಘಟನೆಗಳಲ್ಲಿ ಎಷ್ಟೋ ಚಾಲಕರು ಜೀವ ಕಳೆದುಕೊಂಡಿದ್ದಾರೆ ಎಂದು ಮನವಿ ಪತ್ರದಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.