ಜನವಾಡ: ತೆಲಂಗಾಣದಿಂದ ಬೈಕ್ಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 20 ಕೆ.ಜಿ. ಗಾಂಜಾವನ್ನು ಸಿಇಎನ್ ಅಪರಾಧ ಪೊಲೀಸ್ ಠಾಣೆ ಸಿಬ್ಬಂದಿ ಬೀದರ್ ತಾಲ್ಲೂಕಿನ ಮಲ್ಕಾಪುರ ಬಳಿ ಭಾನುವಾರ ವಶಪಡಿಸಿಕೊಂಡಿದ್ದಾರೆ.
ತೆಲಂಗಾಣದ ಜಹೀರಾಬಾದ್ ತಾಲ್ಲೂಕಿನ ನ್ಯಾಲಕಲ್ ತಾಂಡಾದ ಪ್ರಕಾಶ ರಾಠೋಡ ಹಾಗೂ ಬೀದರ್ ತಾಲ್ಲೂಕಿನ ಸಿಂದೋಲ್ ತಾಂಡಾದ ರಾಜೇಂದ್ರ ರಾಠೋಡ ಎಂಬುವರನ್ನು ಬಂಧಿಸಿ, ಎರಡು ಬೈಕ್ಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್. ಅವರ ಮಾರ್ಗ ದರ್ಶನದಲ್ಲಿ ಕಾರ್ಯಾಚರಣೆ ನಡೆದಿದೆ. ಬೀದರ್ನ ಸಿಇಎನ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.