<p><strong>ಬೀದರ್:</strong> ಬಹುತೇಕ ಎಲ್ಲ ಹಬ್ಬಗಳು ಮುಗಿದಿವೆ. ನಿಧಾನವಾಗಿ ಚಳಿ ಆವರಿಸಿಕೊಳ್ಳುತ್ತಿದೆ. ಈ ನಡುವೆ ಕೆಲ ತರಕಾರಿ ಬೆಲೆ ನಿಧಾನವಾಗಿ ಏರಿಕೆಯಾದರೆ, ಇನ್ನು ಕೆಲ ತರಕಾರಿ ಬೆಲೆ ಅಷ್ಟೇ ನಿಧಾನವಾಗಿ ಇಳಿದಿದೆ.</p>.<p>ಮಾರುಕಟ್ಟೆಯಲ್ಲಿ ನುಗ್ಗೆಕಾಯಿ ಬೆಲೆಯ ಆರ್ಭಟ ಮುಂದುವರಿದಿದೆ. ನುಗ್ಗೆಕಾಯಿ ಪ್ರತಿ ಕೆ.ಜಿಗೆ ₹700 ಹಾಗೂ ಒಂದಕ್ಕೆ ₹50 ಮಾರಾಟವಾಗುತ್ತಿದೆ. ಸಾಮಾನ್ಯ ಗ್ರಾಹಕ ನುಗ್ಗೆಕಾಯಿ ಬೆಲೆ ಕೇಳಿಯೇ ಮಾರುದ್ದ ಜಿಗಿಯುತ್ತಿದ್ದಾರೆ. ಬೆಲೆ ಹೆಚ್ಚಳವಾದರೂ ಕೆಲ ನುಗ್ಗೆ ಪ್ರಿಯರು ಕೇಳಿ ಖರೀದಿಸುತ್ತಿದ್ದಾರೆ.</p>.<p>ಗಜ್ಜರಿ ಬೆಲೆ ಒಮ್ಮೆಲೇ ದುಪ್ಪಟ್ಟಾಗಿದೆ. ಪ್ರತಿ ಕ್ವಿಂಟಲ್ಗೆ ₹4 ಸಾವಿರ ಇದ್ದ ಗಜ್ಜರಿ ಬೆಲೆ ₹8 ಸಾವಿರಕ್ಕೆ ಏರಿದೆ.</p>.<p>ಈರುಳ್ಳಿ, ಬೆಳ್ಳುಳ್ಳಿ, ಬೀಟ್ರೂಟ್, ಬದನೆಕಾಯಿ, ತೊಂಡೆಕಾಯಿ, ಎಲೆಕೋಸು ಬೆಲೆ ₹1 ಸಾವಿರ ಹೆಚ್ಚಳವಾಗಿದೆ. ಹಸಿ ಮೆಣಸಿನಕಾಯಿ ಪ್ರತಿ ಕ್ವಿಂಟಲ್ಗೆ ₹500 ಏರಿಕೆಯಾಗಿದೆ. ಆಲೂಗಡ್ಡೆ ಹಾಗೂ ಹೂಕೋಸು ಬೆಲೆ ಮಾತ್ರ ಸ್ಥಿರವಾಗಿದೆ. ಮೆಂತೆಸೊಪ್ಪು ಹಾಗೂ ಕರಿಬೇವು ಬೆಲೆ ಕ್ವಿಂಟಲ್ಗೆ ₹4 ಸಾವಿರ, ಪಾಲಕ್ ₹3 ಸಾವಿರ, ಹಿರೇಕಾಯಿ ಹಾಗೂ ಕೊತಂಬರಿ ₹2 ಸಾವಿರ, ಬೆಂಡೆಕಾಯಿ, ಟೊಮೆಟೊ, ಬೀನ್ಸ್ ಹಾಗೂ ಸಬ್ಬಸಗಿ ಸೊಪ್ಪಿನ ಬೆಲೆ ₹1 ಸಾವಿರ ಕುಸಿದಿದೆ.</p>.<p>ನಗರದ ಸಗಟು ತರಕಾರಿ ಮಾರುಕಟ್ಟೆಗೆ ಮಹಾರಾಷ್ಟ್ರದ ಸೊಲ್ಲಾಪುರದಿಂದ ಈರುಳ್ಳಿ, ಬೆಳ್ಳುಳ್ಳಿ, ಆಗ್ರಾದಿಂದ ಆಲೂಗಡ್ಡೆ, ಹೈದರಾಬಾದ್ನಿಂದ ಮೆಣಸಿನಕಾಯಿ, ಬೀನ್ಸ್, ಬೀಟ್ರೂಟ್, ಗಜ್ಜರಿ, ಎಲೆಕೋಸು, ಹೂಕೋಸು, ತೊಂಡೆಕಾಯಿ ಹಾಗೂ ಟೊಮೆಟೊ ಆವಕವಾಗಿದೆ.</p>.<p>‘ಜಿಲ್ಲೆಯ ಚಿಟಗುಪ್ಪ ಹಾಗೂ ಭಾಲ್ಕಿ ತಾಲ್ಲೂಕಿನಿಂದ ಕರಿಬೇವು, ಕೊತ್ತಂಬರಿ, ಬದನೆಕಾಯಿ, ಬೆಂಡೆಕಾಯಿ, ಸಬ್ಬಸಗಿ ಮತ್ತು ಪಾಲಕ್ ಸೊಪ್ಪು ಬಂದಿದೆ’ ಎಂದು ಗಾಂಧಿ ಗಂಜ್ ತರಕಾರಿ ವ್ಯಾಪಾರಿ ವಿಜಯಕುಮಾರ ಕಡ್ಡೆ ಹೇಳುತ್ತಾರೆ.</p>.<p>ಹುಮನಾಬಾದ್, ಚಿಟಗುಪ್ಪ ಹಾಗೂ ಭಾಲ್ಕಿ ತಾಲ್ಲೂಕಿನ ರೈತರು ಮಾತ್ರ ಅಲ್ಪಸ್ವಲ್ಪ ತರಕಾರಿ ಬೆಳೆಯುತ್ತಿದ್ದಾರೆ. ಪ್ರತಿ ವಾರ ಬೆಳಗಾವಿಯಿಂದ ಬರುತ್ತಿದ್ದ ತರಕಾರಿ ಕಡಿಮೆಯಾಗಿದೆ. ಮಹಾರಾಷ್ಟ್ರ, ತೆಲಂಗಾಣ ಹಾಗೂ ಉತ್ತರಪ್ರದೇಶದ ತರಕಾರಿ ನಗರದ ಮಾರುಕಟ್ಟೆಗೆ ಬರುತ್ತಿದೆ.</p>.<p>ಸೊಲ್ಲಾಪುರ ಹಾಗೂ ಔರಂಗಾಬಾದ್ ಜಿಲ್ಲೆಯಲ್ಲಿ ಬೆಳೆಯುವ ತರಕಾರಿಯೇ ಬೀದರ್ ಜಿಲ್ಲೆಯ ಜನರಿಗೆ ಆಧಾರವಾಗಿದೆ. ಈ ಬಾರಿ ಜಿಲ್ಲೆಯಲ್ಲಿ ವಾಡಿಕೆಗಿಂತಲೂ ಕಡಿಮೆ ಮಳೆಯಾಗಿದೆ. ಅಂತರ್ಜಲ ಮಟ್ಟದಲ್ಲಿ ಏರಿಕೆಯಾಗಿಲ್ಲ. ಬೇಸಿಗೆಯಲ್ಲಿ ನೀರಿನ ಸಮಸ್ಯೆಯಾಗುವ ಸಾಧ್ಯತೆ ಇದೆ. ಕೃಷಿ ಹಾಗೂ ತೋಟಗಾರಿಕೆ ಮೇಲೂ ಪರಿಣಾಮ ಬೀರಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಬಹುತೇಕ ಎಲ್ಲ ಹಬ್ಬಗಳು ಮುಗಿದಿವೆ. ನಿಧಾನವಾಗಿ ಚಳಿ ಆವರಿಸಿಕೊಳ್ಳುತ್ತಿದೆ. ಈ ನಡುವೆ ಕೆಲ ತರಕಾರಿ ಬೆಲೆ ನಿಧಾನವಾಗಿ ಏರಿಕೆಯಾದರೆ, ಇನ್ನು ಕೆಲ ತರಕಾರಿ ಬೆಲೆ ಅಷ್ಟೇ ನಿಧಾನವಾಗಿ ಇಳಿದಿದೆ.</p>.<p>ಮಾರುಕಟ್ಟೆಯಲ್ಲಿ ನುಗ್ಗೆಕಾಯಿ ಬೆಲೆಯ ಆರ್ಭಟ ಮುಂದುವರಿದಿದೆ. ನುಗ್ಗೆಕಾಯಿ ಪ್ರತಿ ಕೆ.ಜಿಗೆ ₹700 ಹಾಗೂ ಒಂದಕ್ಕೆ ₹50 ಮಾರಾಟವಾಗುತ್ತಿದೆ. ಸಾಮಾನ್ಯ ಗ್ರಾಹಕ ನುಗ್ಗೆಕಾಯಿ ಬೆಲೆ ಕೇಳಿಯೇ ಮಾರುದ್ದ ಜಿಗಿಯುತ್ತಿದ್ದಾರೆ. ಬೆಲೆ ಹೆಚ್ಚಳವಾದರೂ ಕೆಲ ನುಗ್ಗೆ ಪ್ರಿಯರು ಕೇಳಿ ಖರೀದಿಸುತ್ತಿದ್ದಾರೆ.</p>.<p>ಗಜ್ಜರಿ ಬೆಲೆ ಒಮ್ಮೆಲೇ ದುಪ್ಪಟ್ಟಾಗಿದೆ. ಪ್ರತಿ ಕ್ವಿಂಟಲ್ಗೆ ₹4 ಸಾವಿರ ಇದ್ದ ಗಜ್ಜರಿ ಬೆಲೆ ₹8 ಸಾವಿರಕ್ಕೆ ಏರಿದೆ.</p>.<p>ಈರುಳ್ಳಿ, ಬೆಳ್ಳುಳ್ಳಿ, ಬೀಟ್ರೂಟ್, ಬದನೆಕಾಯಿ, ತೊಂಡೆಕಾಯಿ, ಎಲೆಕೋಸು ಬೆಲೆ ₹1 ಸಾವಿರ ಹೆಚ್ಚಳವಾಗಿದೆ. ಹಸಿ ಮೆಣಸಿನಕಾಯಿ ಪ್ರತಿ ಕ್ವಿಂಟಲ್ಗೆ ₹500 ಏರಿಕೆಯಾಗಿದೆ. ಆಲೂಗಡ್ಡೆ ಹಾಗೂ ಹೂಕೋಸು ಬೆಲೆ ಮಾತ್ರ ಸ್ಥಿರವಾಗಿದೆ. ಮೆಂತೆಸೊಪ್ಪು ಹಾಗೂ ಕರಿಬೇವು ಬೆಲೆ ಕ್ವಿಂಟಲ್ಗೆ ₹4 ಸಾವಿರ, ಪಾಲಕ್ ₹3 ಸಾವಿರ, ಹಿರೇಕಾಯಿ ಹಾಗೂ ಕೊತಂಬರಿ ₹2 ಸಾವಿರ, ಬೆಂಡೆಕಾಯಿ, ಟೊಮೆಟೊ, ಬೀನ್ಸ್ ಹಾಗೂ ಸಬ್ಬಸಗಿ ಸೊಪ್ಪಿನ ಬೆಲೆ ₹1 ಸಾವಿರ ಕುಸಿದಿದೆ.</p>.<p>ನಗರದ ಸಗಟು ತರಕಾರಿ ಮಾರುಕಟ್ಟೆಗೆ ಮಹಾರಾಷ್ಟ್ರದ ಸೊಲ್ಲಾಪುರದಿಂದ ಈರುಳ್ಳಿ, ಬೆಳ್ಳುಳ್ಳಿ, ಆಗ್ರಾದಿಂದ ಆಲೂಗಡ್ಡೆ, ಹೈದರಾಬಾದ್ನಿಂದ ಮೆಣಸಿನಕಾಯಿ, ಬೀನ್ಸ್, ಬೀಟ್ರೂಟ್, ಗಜ್ಜರಿ, ಎಲೆಕೋಸು, ಹೂಕೋಸು, ತೊಂಡೆಕಾಯಿ ಹಾಗೂ ಟೊಮೆಟೊ ಆವಕವಾಗಿದೆ.</p>.<p>‘ಜಿಲ್ಲೆಯ ಚಿಟಗುಪ್ಪ ಹಾಗೂ ಭಾಲ್ಕಿ ತಾಲ್ಲೂಕಿನಿಂದ ಕರಿಬೇವು, ಕೊತ್ತಂಬರಿ, ಬದನೆಕಾಯಿ, ಬೆಂಡೆಕಾಯಿ, ಸಬ್ಬಸಗಿ ಮತ್ತು ಪಾಲಕ್ ಸೊಪ್ಪು ಬಂದಿದೆ’ ಎಂದು ಗಾಂಧಿ ಗಂಜ್ ತರಕಾರಿ ವ್ಯಾಪಾರಿ ವಿಜಯಕುಮಾರ ಕಡ್ಡೆ ಹೇಳುತ್ತಾರೆ.</p>.<p>ಹುಮನಾಬಾದ್, ಚಿಟಗುಪ್ಪ ಹಾಗೂ ಭಾಲ್ಕಿ ತಾಲ್ಲೂಕಿನ ರೈತರು ಮಾತ್ರ ಅಲ್ಪಸ್ವಲ್ಪ ತರಕಾರಿ ಬೆಳೆಯುತ್ತಿದ್ದಾರೆ. ಪ್ರತಿ ವಾರ ಬೆಳಗಾವಿಯಿಂದ ಬರುತ್ತಿದ್ದ ತರಕಾರಿ ಕಡಿಮೆಯಾಗಿದೆ. ಮಹಾರಾಷ್ಟ್ರ, ತೆಲಂಗಾಣ ಹಾಗೂ ಉತ್ತರಪ್ರದೇಶದ ತರಕಾರಿ ನಗರದ ಮಾರುಕಟ್ಟೆಗೆ ಬರುತ್ತಿದೆ.</p>.<p>ಸೊಲ್ಲಾಪುರ ಹಾಗೂ ಔರಂಗಾಬಾದ್ ಜಿಲ್ಲೆಯಲ್ಲಿ ಬೆಳೆಯುವ ತರಕಾರಿಯೇ ಬೀದರ್ ಜಿಲ್ಲೆಯ ಜನರಿಗೆ ಆಧಾರವಾಗಿದೆ. ಈ ಬಾರಿ ಜಿಲ್ಲೆಯಲ್ಲಿ ವಾಡಿಕೆಗಿಂತಲೂ ಕಡಿಮೆ ಮಳೆಯಾಗಿದೆ. ಅಂತರ್ಜಲ ಮಟ್ಟದಲ್ಲಿ ಏರಿಕೆಯಾಗಿಲ್ಲ. ಬೇಸಿಗೆಯಲ್ಲಿ ನೀರಿನ ಸಮಸ್ಯೆಯಾಗುವ ಸಾಧ್ಯತೆ ಇದೆ. ಕೃಷಿ ಹಾಗೂ ತೋಟಗಾರಿಕೆ ಮೇಲೂ ಪರಿಣಾಮ ಬೀರಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>