ಬರಗಾಲಕ್ಕೆ ಸಂಬಂಧಿಸಿದಂತೆ ತಮ್ಮ ಹಂತದಲ್ಲಿ ಬಗೆಹರಿಸುವ ಎಲ್ಲ ಸಮಸ್ಯೆಗಳನ್ನು ಬಗೆಹರಿಸುತ್ತೇನೆ. ಸರ್ಕಾರ ಮಟ್ಟದಲ್ಲಿ ಬಗೆಹರಿಸುವ ಸಮಸ್ಯೆಗಳಾಗಿದ್ದು ಅವುಗಳ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ.ಶಿವಾನಂದ ಮೇತ್ರಿ ತಹಶೀಲ್ದಾರ್
ನೀರಾವರಿ ಸೌಲಭ್ಯ ಇರುವ ರೈತರಿಗೆ ಕೃಷಿ ಇಲಾಖೆ ವತಿಯಿಂದ ರಿಯಾಯಿತಿ ದರದಲ್ಲಿ ತುಂತುರು ಹಾಗೂ ಹನಿ ನೀರಾವರಿ ಯೋಜನೆ ಅಡಿಯಲ್ಲಿ ಸ್ಪಿಂಕ್ಲರ್ ಪೈಪ್ ನೀಡಲಾಗುತ್ತಿದ್ದು ಅದರ ಸದುಪಯೋಗಪಡಿಸಿಕೊಳ್ಳಿ.ಮಾರ್ಥಂಡ ಮಚಕುರಿ ಸಹಾಯಕ ಕೃಷಿ ನಿರ್ದೇಶಕ ಹುಲಸೂರ ತಾಲ್ಲೂಕು
ಬರ ಘೋಷಣೆಯಾದರೂ ಬೆಳೆಹಾನಿಗೆ ಪರಿಹಾರ ಇನ್ನೂ ಬಂದಿಲ್ಲ. ಶೀಘ್ರ ಸರ್ಕಾರ ರೈತರ ಖಾತೆಗೆ ಬೆಳೆ ಪರಿಹಾರ ಹಣ ಹಾಕಿ ನುಡಿದಂತೆ ನಡೆಯಬೇಕು.ಮಲ್ಲಿಕಾರ್ಜುನ್ ಸ್ವಾಮಿ ಜಿಲ್ಲಾಧ್ಯಕ್ಷ ಕರ್ಣಾಟಕ ರಾಜ್ಯ ರೈತ ಸಂಘ ಬೀದರ್
ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮವಹಿಸಲಾಗುವುದು. ನರೇಗಾದ ಅಡಿಯಲ್ಲಿ ಉದ್ಯೋಗ ಕಲ್ಪಿಸಲು ಪಿಡಿಒಗಳಿಗೆ ಸೂಚಿಸಲಾಗಿದೆ.ಮಹದೇವ ಬಾಬಳಗಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.