ಸದ್ಯ ಕಳೆದ 2-3 ದಿನಗಳಿಂದ ಬಿಸಿಲಿನ ತಾಪ ಏರಿಕೆಯಾಗಿದೆ. ಇದೇ ರೀತಿ ಉಷ್ಣತೆ ಏರುಗತಿಯಲ್ಲಿ ಸಾಗಿದರೆ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ‘ಜನ ಹೆಚ್ಚು ನೀರು ಕುಡಿಯುವುದು, ದೇಹ ನಿರ್ಜಲೀಕರಣಗೊಳ್ಳದಂತೆ ನೋಡಿಕೊಳ್ಳುವುದು, ಬಿಸಿಲಿನಲ್ಲಿ ಹೆಚ್ಚು ಓಡಾಡದೆ ನೆರಳಿನ ಆಶ್ರಯ ಪಡೆಯುವುದು ಅತ್ಯಂತ ಅವಶ್ಯಕವಾಗಿದೆ’ ಎಂದು ಖಟಕಚಿಂಚೋಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶೇಷನಾಗ ಹಿಬಾರೆ ತಿಳಿಸಿದ್ದಾರೆ.