‘ಕಳೆದ ಕೆಲ ದಿನಗಳ ಹಿಂದೆ ಕ್ಷೇತ್ರದ ಹುಣಸನಾಳ ಗ್ರಾಮದಲ್ಲಿಯೂ ಇದೇ ರೀತಿ ಶಬ್ದ ಕೇಳಿ ಬಂದಿತ್ತು. ಹೀಗಾಗಿ ಭೂಗರ್ಭ ಶಾಸ್ತ್ರಜ್ಞರ ತಂಡ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿತ್ತು. ಸಮಸ್ಯೆ ಇಲ್ಲ ಎಂದು ತಿಳಿಸಿತ್ತು. ಈಗ ಕುಮಾರ ಚಿಂಚೋಳಿ ಗ್ರಾಮದಲ್ಲಿ ಶಬ್ದ ಕೇಳಿ ಬರುತ್ತಿರುವುದರಿಂದ ಗ್ರಾಮಸ್ಥರು ಆತಂಕಗೊಂಡಿರುವುದು ಗಮನಕ್ಕೆ ಬಂದಿದೆ. ದೂರವಾಣಿ ಮೂಲಕ ಗ್ರಾಮದ ಪ್ರಮುಖರ ಜತೆ ಮಾತನಾಡಿ ಧೈರ್ಯ ಹೇಳಿದ್ದೇನೆ. ಶನಿವಾರ (ಅ.9) ಮಧ್ಯಾಹ್ನ ಅಧಿಕಾರಿಗಳ ತಂಡದೊಂದಿಗೆ ಗ್ರಾಮಕ್ಕೆ ಭೇಟಿ ನೀಡುತ್ತೇನೆ’ ಎಂದು ಶಾಸಕ ರಾಜಶೇಖರ ಪಾಟೀಲ ತಿಳಿಸಿದರು.