ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಹೈನುಗಾರಿಕೆಯಿಂದ ಆರ್ಥಿಕ ಸಬಲತೆ’

ಜಾನುವಾರು ಸಂಶೋಧನೆ ಕೇಂದ್ರಕ್ಕೆ ಕ್ಷೇತ್ರ ಭೇಟಿ
Last Updated 25 ಸೆಪ್ಟೆಂಬರ್ 2021, 15:16 IST
ಅಕ್ಷರ ಗಾತ್ರ

ಬೀದರ್: ಕಲಬುರ್ಗಿಯ ಮೈರಾಡಾ ಸಂಸ್ಥೆ ವತಿಯಿಂದ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ನಬಾರ್ಡ್) ಪ್ರಾಯೋಜಿತ ತರಬೇತಿ ಕಾರ್ಯಕ್ರಮದಡಿ 30 ರೈತ ಮಹಿಳೆಯರು ಹುಮನಾಬಾದ್ ತಾಲ್ಲೂಕಿನ ಹಳ್ಳಿಖೇಡ(ಬಿ) ಸಮೀಪದ ಜಾನುವಾರು ಸಂಶೋಧನೆ ಹಾಗೂ ಮಾಹಿತಿ ಕೇಂದ್ರ (ದೇವಣಿ)ಕ್ಕೆ ಕ್ಷೇತ್ರ ಭೇಟಿ ನೀಡಿದರು.

ಲಾಭದಾಯಕ ಪಶು ಪಾಲನೆ ಜಾನುವಾರು ನಿರ್ವಹಣೆ ಪದ್ಧತಿ, ಬೀದರ್‍ನಲ್ಲಿ ಇರುವ ವಿವಿಧ ರೀತಿಯ ಮೇವಿನ ಬೆಳೆಗಳ ಕುರಿತು ಮಾಹಿತಿ ಪಡೆದರು.

ರೈತರು ಕೃಷಿಯ ಜತೆಗೆ ಹೈನುಗಾರಿಕೆಯಂತಹ ಉಪಕಸುಬುಗಳನ್ನು ಕೈಗೊಂಡರೆ ಆರ್ಥಿಕವಾಗಿ ಸಬಲರಾಗಬಹುದು ಎಂದು ಕೇಂದ್ರದ ಮುಖ್ಯಸ್ಥ ಡಾ. ಪ್ರಕಾಶಕುಮಾರ ರಾಠೋಡ್ ತಿಳಿಸಿದರು.

ರೈತ ಮಹಿಳೆಯರಿಗೆ ಸೂಪರ್ ನೇಪಿಯರ್ ಮೇವಿನ ತುಂಡು ಹಾಗೂ ಚೊಗಚೆ ಮೇವಿನ ಬೀಜಗಳನ್ನು ವಿತರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT