<p><strong>ಚಿಟಗುಪ್ಪ: </strong>‘ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡುವುದರಿಂದ ಸಮಾಜ ಸುಧಾರಣೆಯಾಗುತ್ತದೆ’ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕಿ ಸುರೇಖಾ ತಿಳಿಸಿದರು.</p>.<p>ತಾಲ್ಲೂಕಿನ ನಿರ್ಣಾದ ನಾಗಯ್ಯ ವೀರಯ್ಯ ಮಠಪತಿ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ನಡೆದ ನಾಗಯ್ಯ ಸ್ವಾಮಿ ಅವರ 27ನೇ ಸ್ಮರಣೋತ್ಸವ ಹಾಗೂ ಅಪೆಕ್ಸ್ ನಂದಿನಿ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ದಯೆ, ಕರುಣೆ, ಶ್ರದ್ಧೆ, ಪ್ರಾಮಾಣಿಕತೆ, ಸರಳ ಜೀವನ ಈ ಎಲ್ಲವೂ ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಂಡಾಗ ವೈಯಕ್ತಿಕ ಪ್ರಗತಿ ಹಾಗೂ ಸಮಾಜದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದರು.</p>.<p>ನಂದಿನಿ ವಿದ್ಯಾಲಯದ ಶ್ರಮದಾಯಕವಾದ ಗುಣಾತ್ಮಕ ಸೇವೆ ಎಲ್ಲರಿಗೂ ಮಾದರಿಯಾಗಿದೆ ಎಂದು ಹೇಳಿದರು.</p>.<p>ಭಾಲ್ಕಿ ಪೊಲೀಸ್ ವೃತ್ತ ನಿರೀಕ್ಷಕ ಗುರಣ್ಣ ಎಸ್.ಹೆಬ್ಬಾಳ ಮಾತನಾಡಿ,‘ಮಕ್ಕಳ ಸುರಕ್ಷತೆಗೆ ನಂದಿನಿ ವಿದ್ಯಾಲಯದ ಒಳಾಂಗಣ ವ್ಯವಸ್ಥೆ ಅತ್ಯಂತ ಪೂರಕವಾಗಿದೆ’ ಎಂದರು.</p>.<p>ಬಿಎಸ್ಎಸ್ಕೆ ನಿರ್ದೇಶಕ ಮಲ್ಲಿಕಾರ್ಜುನ ಪಾಟೀಲ, ನಿವೃತ್ತ ಪ್ರಾಚಾರ್ಯ ಎಂ.ಎಂ.ಮಾಸೂಲ್ದಾರ್, ನೀಲಕಂಠ ಇಸ್ಲಾಮಪುರ್, ವಿಠಲರಾವ್ ಪಠಣಕರ್ ಹಾಗೂ ಅಸ್ಲಾಮ ಮಿಯ್ಯ ಮಾತನಾಡಿದರು.</p>.<p>ಆಹಾರ ಮತ್ತು ನಾಗರಿಕರ ಸರಬರಾಜು ಇಲಾಖೆ ಉಪನಿರ್ದೇಶಕಿ ಸುರೇಖಾ ಹಾಗೂ ಸಿಪಿಐ ಜಿ.ಎಸ್.ಹೆಬ್ಬಾಳ ಅವರಿಗೆ ‘ನಾಗಯ್ಯ ಸ್ವಾಮಿ ಸೇವಾ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅಗ್ರಶ್ರೇಣಿಯಲ್ಲಿ ಪಾಸಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.</p>.<p>ಮಕ್ಕಳಿಂದ ದೇಶ ಭಕ್ತಿ, ಭಾವೈಕ್ಯ, ಧಾರ್ಮಿಕತೆಯ ಮಹತ್ವ ಸಾರುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.</p>.<p>ಶಕುಂತಲಾ ಬೆಲ್ದಾಳೆ, ಪತ್ರಕರ್ತ ಸಂಜೀವಕುಮಾರ ಬುಕ್ಕಾ, ಡಿಸಿಸಿ ಬ್ಯಾಂಕ್ ನಿರ್ದೇಶಕ ಜಗನ್ನಾಥ ರೆಡ್ಡಿ ಏಖ್ಖೇಳಿ, ವಿಜಯರಡ್ಡಿ ಲಚ್ಚನಗಾರ್, ಶ್ರೀನಿವಾಸ ಪತ್ತಾರ, ಘಾಳಯ್ಯ ಸ್ವಾಮಿ, ಅನಿಲರಡ್ಡಿ ಲಚ್ಚನಗಾರ್, ರಸೂಲಸಾಬ್, ಮಸ್ತಾನ ನೂರೋದ್ದಿನ್ ಹಾಗೂ ಬಸವಣಪ್ಪ ಚಿಟ್ಟಾ ಇದ್ದರು.</p>.<p>ಶಂಕರರಾವ್ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಮಾತೆ ಸಂಗಮ್ಮ ಮಠಪತಿ ಸಾನ್ನಿಧ್ಯ ವಹಿಸಿದ್ದರು. ರೇವಣಸಿದ್ಧ ಕುಂಬಾರ ನಿರೂಪಿಸಿದರು. ಗುರುಸ್ವಾಮಿ ಸ್ವಾಗತಿಸಿದರು. ಮುಖ್ಯಶಿಕ್ಷಕಿ ಉಮಾಶ್ರೀ ಹಿರಾ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಟಗುಪ್ಪ: </strong>‘ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡುವುದರಿಂದ ಸಮಾಜ ಸುಧಾರಣೆಯಾಗುತ್ತದೆ’ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕಿ ಸುರೇಖಾ ತಿಳಿಸಿದರು.</p>.<p>ತಾಲ್ಲೂಕಿನ ನಿರ್ಣಾದ ನಾಗಯ್ಯ ವೀರಯ್ಯ ಮಠಪತಿ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ನಡೆದ ನಾಗಯ್ಯ ಸ್ವಾಮಿ ಅವರ 27ನೇ ಸ್ಮರಣೋತ್ಸವ ಹಾಗೂ ಅಪೆಕ್ಸ್ ನಂದಿನಿ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ದಯೆ, ಕರುಣೆ, ಶ್ರದ್ಧೆ, ಪ್ರಾಮಾಣಿಕತೆ, ಸರಳ ಜೀವನ ಈ ಎಲ್ಲವೂ ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಂಡಾಗ ವೈಯಕ್ತಿಕ ಪ್ರಗತಿ ಹಾಗೂ ಸಮಾಜದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದರು.</p>.<p>ನಂದಿನಿ ವಿದ್ಯಾಲಯದ ಶ್ರಮದಾಯಕವಾದ ಗುಣಾತ್ಮಕ ಸೇವೆ ಎಲ್ಲರಿಗೂ ಮಾದರಿಯಾಗಿದೆ ಎಂದು ಹೇಳಿದರು.</p>.<p>ಭಾಲ್ಕಿ ಪೊಲೀಸ್ ವೃತ್ತ ನಿರೀಕ್ಷಕ ಗುರಣ್ಣ ಎಸ್.ಹೆಬ್ಬಾಳ ಮಾತನಾಡಿ,‘ಮಕ್ಕಳ ಸುರಕ್ಷತೆಗೆ ನಂದಿನಿ ವಿದ್ಯಾಲಯದ ಒಳಾಂಗಣ ವ್ಯವಸ್ಥೆ ಅತ್ಯಂತ ಪೂರಕವಾಗಿದೆ’ ಎಂದರು.</p>.<p>ಬಿಎಸ್ಎಸ್ಕೆ ನಿರ್ದೇಶಕ ಮಲ್ಲಿಕಾರ್ಜುನ ಪಾಟೀಲ, ನಿವೃತ್ತ ಪ್ರಾಚಾರ್ಯ ಎಂ.ಎಂ.ಮಾಸೂಲ್ದಾರ್, ನೀಲಕಂಠ ಇಸ್ಲಾಮಪುರ್, ವಿಠಲರಾವ್ ಪಠಣಕರ್ ಹಾಗೂ ಅಸ್ಲಾಮ ಮಿಯ್ಯ ಮಾತನಾಡಿದರು.</p>.<p>ಆಹಾರ ಮತ್ತು ನಾಗರಿಕರ ಸರಬರಾಜು ಇಲಾಖೆ ಉಪನಿರ್ದೇಶಕಿ ಸುರೇಖಾ ಹಾಗೂ ಸಿಪಿಐ ಜಿ.ಎಸ್.ಹೆಬ್ಬಾಳ ಅವರಿಗೆ ‘ನಾಗಯ್ಯ ಸ್ವಾಮಿ ಸೇವಾ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅಗ್ರಶ್ರೇಣಿಯಲ್ಲಿ ಪಾಸಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.</p>.<p>ಮಕ್ಕಳಿಂದ ದೇಶ ಭಕ್ತಿ, ಭಾವೈಕ್ಯ, ಧಾರ್ಮಿಕತೆಯ ಮಹತ್ವ ಸಾರುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.</p>.<p>ಶಕುಂತಲಾ ಬೆಲ್ದಾಳೆ, ಪತ್ರಕರ್ತ ಸಂಜೀವಕುಮಾರ ಬುಕ್ಕಾ, ಡಿಸಿಸಿ ಬ್ಯಾಂಕ್ ನಿರ್ದೇಶಕ ಜಗನ್ನಾಥ ರೆಡ್ಡಿ ಏಖ್ಖೇಳಿ, ವಿಜಯರಡ್ಡಿ ಲಚ್ಚನಗಾರ್, ಶ್ರೀನಿವಾಸ ಪತ್ತಾರ, ಘಾಳಯ್ಯ ಸ್ವಾಮಿ, ಅನಿಲರಡ್ಡಿ ಲಚ್ಚನಗಾರ್, ರಸೂಲಸಾಬ್, ಮಸ್ತಾನ ನೂರೋದ್ದಿನ್ ಹಾಗೂ ಬಸವಣಪ್ಪ ಚಿಟ್ಟಾ ಇದ್ದರು.</p>.<p>ಶಂಕರರಾವ್ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಮಾತೆ ಸಂಗಮ್ಮ ಮಠಪತಿ ಸಾನ್ನಿಧ್ಯ ವಹಿಸಿದ್ದರು. ರೇವಣಸಿದ್ಧ ಕುಂಬಾರ ನಿರೂಪಿಸಿದರು. ಗುರುಸ್ವಾಮಿ ಸ್ವಾಗತಿಸಿದರು. ಮುಖ್ಯಶಿಕ್ಷಕಿ ಉಮಾಶ್ರೀ ಹಿರಾ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>