<p><strong>ಔರಾದ್:</strong> 'ಮಕ್ಕಳಿಗೆ ವಿದ್ಯೆ ಜತೆ ಉತ್ತಮ ಸಂಸ್ಕಾರ ಕಲಿಸುವುದು ಅಷ್ಟೇ ಮುಖ್ಯವಾಗಿದೆ' ಎಂದು ಹಣೆಗಾಂವ್ ಶಂಕರಲಿಂಗ ಶಿವಾಚಾರ್ಯರು ಹೇಳಿದರು.</p>.<p>ಪಟ್ಟಣದ ನವಚೇತನ ಗುರುಕುಲ ಶಾಲೆಯಲ್ಲಿ ಶನಿವಾರ ಪಾಲಕರಿಂದ ಮಕ್ಕಳಿಗೆ ಕೈತುತ್ತು ಉಣಿಸುವ ಕಾರ್ಯಕ್ರಮದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.</p>.<p>'ಪಾಲಕರು ತಮ್ಮ ಮಕ್ಕಳನ್ನು ಯಂತ್ರದಂತೆ ಬೆಳೆಸುತ್ತಿದ್ದೇವೆ. ಈ ಕಾರಣ ವೃದ್ಧಾಶ್ರಮಗಳು ಜಾಸ್ತಿಯಾಗುತ್ತಿವೆ' ಎಂದು ಕಳವಳವ್ಯಕ್ತಪಪಡಿಸಿದರು.</p>.<p>ಬ್ರಹ್ಮಕುಮಾರಿ ಈಶ್ವರಿ ವಿದ್ಯಾಲಯದ ಸುಭಾಷಾ ಬಹೆನಜೀ ಮಾತನಾಡಿ 'ಶಾಲೆಗಳಲ್ಲಿ ವಿದ್ಯೆ ಜತೆ ಸಂಸ್ಕಾರ ಕಲಿಸಬೇಕು. ಮಹಾತ್ಮರ ವಿಚಾರಗಳು ಮಕ್ಕಳ ತಲೆಯಲ್ಲಿ ಹಾಕಬೇಕು' ಎಂದರು.</p>.<p>ಗುಂಡಯ್ಯ ಸ್ವಾಮಿ, ಪ್ರಭುರಾವ ಕಸ್ತೂರೆ, ಅಮೃತಪ್ಪ ಪಾರಾ, ಸಂಜುಕುಮಾರ ಶೆಟಕಾರ ಮತ್ತಿತರರು ಇದ್ದರು. ಜಗದೇವಿ ಜಾಂತೆ ಸ್ವಾಗತಿಸಿದರು.ಇದೇ ವೇಳೆ ಮಕ್ಕಳು ಪಾಲಕರನ್ನು ಪೂಜಿಸಿದರು. ಪಾಲಕರು ತಮ್ಮ ಮಕ್ಕಳಿಗೆ ಕೈತುತ್ತು ಉಣಬಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಾದ್:</strong> 'ಮಕ್ಕಳಿಗೆ ವಿದ್ಯೆ ಜತೆ ಉತ್ತಮ ಸಂಸ್ಕಾರ ಕಲಿಸುವುದು ಅಷ್ಟೇ ಮುಖ್ಯವಾಗಿದೆ' ಎಂದು ಹಣೆಗಾಂವ್ ಶಂಕರಲಿಂಗ ಶಿವಾಚಾರ್ಯರು ಹೇಳಿದರು.</p>.<p>ಪಟ್ಟಣದ ನವಚೇತನ ಗುರುಕುಲ ಶಾಲೆಯಲ್ಲಿ ಶನಿವಾರ ಪಾಲಕರಿಂದ ಮಕ್ಕಳಿಗೆ ಕೈತುತ್ತು ಉಣಿಸುವ ಕಾರ್ಯಕ್ರಮದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.</p>.<p>'ಪಾಲಕರು ತಮ್ಮ ಮಕ್ಕಳನ್ನು ಯಂತ್ರದಂತೆ ಬೆಳೆಸುತ್ತಿದ್ದೇವೆ. ಈ ಕಾರಣ ವೃದ್ಧಾಶ್ರಮಗಳು ಜಾಸ್ತಿಯಾಗುತ್ತಿವೆ' ಎಂದು ಕಳವಳವ್ಯಕ್ತಪಪಡಿಸಿದರು.</p>.<p>ಬ್ರಹ್ಮಕುಮಾರಿ ಈಶ್ವರಿ ವಿದ್ಯಾಲಯದ ಸುಭಾಷಾ ಬಹೆನಜೀ ಮಾತನಾಡಿ 'ಶಾಲೆಗಳಲ್ಲಿ ವಿದ್ಯೆ ಜತೆ ಸಂಸ್ಕಾರ ಕಲಿಸಬೇಕು. ಮಹಾತ್ಮರ ವಿಚಾರಗಳು ಮಕ್ಕಳ ತಲೆಯಲ್ಲಿ ಹಾಕಬೇಕು' ಎಂದರು.</p>.<p>ಗುಂಡಯ್ಯ ಸ್ವಾಮಿ, ಪ್ರಭುರಾವ ಕಸ್ತೂರೆ, ಅಮೃತಪ್ಪ ಪಾರಾ, ಸಂಜುಕುಮಾರ ಶೆಟಕಾರ ಮತ್ತಿತರರು ಇದ್ದರು. ಜಗದೇವಿ ಜಾಂತೆ ಸ್ವಾಗತಿಸಿದರು.ಇದೇ ವೇಳೆ ಮಕ್ಕಳು ಪಾಲಕರನ್ನು ಪೂಜಿಸಿದರು. ಪಾಲಕರು ತಮ್ಮ ಮಕ್ಕಳಿಗೆ ಕೈತುತ್ತು ಉಣಬಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>