<p><strong>ಬೀದರ್:</strong> ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸಚಿವ ಸುರೇಶ್ ಕುಮಾರ್ ಸೆ.29ರಂದು ಬೀದರ್ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.</p>.<p>ಮಂಗಳವಾರ ಕಲಬುರ್ಗಿಯಿಂದ ಹೊರಟು ಬೆಳಿಗ್ಗೆ 9 ಗಂಟೆಗೆ ಬೀದರ್ಗೆ ಬರುವರು. ನಂತರ ಬೀದರ್ ತಾಲ್ಲೂಕಿನ ಯಾಕತಪುರದ ಇನ್ಫಂಟ್ ಜೀಸಸ್ ಹಿರಿಯ ಪ್ರಾಥಮಿಕ ಶಾಲೆ, ಕಮಲನಗರ ತಾಲ್ಲೂಕಿನ ತೋರಣಾದ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಕಮಲನಗರದ ಸಿದ್ದಗಂಗಮ್ಮ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ಕೊಡುವರು.<br />ಮಧ್ಯಾಹ್ನ 12 ಗಂಟೆಗೆ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. 2 ಗಂಟೆಗೆ ಬೀದರ್ನಿಂದ ಹೈದರಾಬಾದ್ ಮಾರ್ಗವಾಗಿ ಚಿಕ್ಕಬಳ್ಳಾಪುರ ತೆರಳುವರು. ಸಚಿವರ ಪ್ರವಾಸದ ಸಂದರ್ಭದಲ್ಲಿ ಹೂಗುಚ್ಛ ಹಾಗೂ ಹೂವಿನಹಾರಗಳನ್ನು ನೀಡಬಾರದು ಎಂದು ಸಚಿವರ ಆಪ್ತ ಕಾರ್ಯದರ್ಶಿ ಚಿದಂಬರ ಪಿ.ಎಂ.ತಿಳಿಸಿದ್ದಾರೆ.</p>.<p class="Briefhead"><strong>ಜಿಲ್ಲೆಯಲ್ಲಿ ಸಾಧಾರಣ ಮಳೆ</strong></p>.<p>ಬೀದರ್, ಭಾಲ್ಕಿ ಕಮಲನಗರ ಔರಾದ್ನಲ್ಲಿ ಶುಕ್ರವಾರ ಸಂಜೆ ಸಾಧಾರಣ ಮಳೆಯಾಗಿದೆ. ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೂ ಬಿಸಿಲಿನ ವಾತಾವರಣ ಇತ್ತು. ಸಂಜೆ ಇದ್ದಕ್ಕಿದ್ದಂತೆಯೇ ಮೋಡ ಕವಿದು ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸಚಿವ ಸುರೇಶ್ ಕುಮಾರ್ ಸೆ.29ರಂದು ಬೀದರ್ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.</p>.<p>ಮಂಗಳವಾರ ಕಲಬುರ್ಗಿಯಿಂದ ಹೊರಟು ಬೆಳಿಗ್ಗೆ 9 ಗಂಟೆಗೆ ಬೀದರ್ಗೆ ಬರುವರು. ನಂತರ ಬೀದರ್ ತಾಲ್ಲೂಕಿನ ಯಾಕತಪುರದ ಇನ್ಫಂಟ್ ಜೀಸಸ್ ಹಿರಿಯ ಪ್ರಾಥಮಿಕ ಶಾಲೆ, ಕಮಲನಗರ ತಾಲ್ಲೂಕಿನ ತೋರಣಾದ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಕಮಲನಗರದ ಸಿದ್ದಗಂಗಮ್ಮ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ಕೊಡುವರು.<br />ಮಧ್ಯಾಹ್ನ 12 ಗಂಟೆಗೆ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. 2 ಗಂಟೆಗೆ ಬೀದರ್ನಿಂದ ಹೈದರಾಬಾದ್ ಮಾರ್ಗವಾಗಿ ಚಿಕ್ಕಬಳ್ಳಾಪುರ ತೆರಳುವರು. ಸಚಿವರ ಪ್ರವಾಸದ ಸಂದರ್ಭದಲ್ಲಿ ಹೂಗುಚ್ಛ ಹಾಗೂ ಹೂವಿನಹಾರಗಳನ್ನು ನೀಡಬಾರದು ಎಂದು ಸಚಿವರ ಆಪ್ತ ಕಾರ್ಯದರ್ಶಿ ಚಿದಂಬರ ಪಿ.ಎಂ.ತಿಳಿಸಿದ್ದಾರೆ.</p>.<p class="Briefhead"><strong>ಜಿಲ್ಲೆಯಲ್ಲಿ ಸಾಧಾರಣ ಮಳೆ</strong></p>.<p>ಬೀದರ್, ಭಾಲ್ಕಿ ಕಮಲನಗರ ಔರಾದ್ನಲ್ಲಿ ಶುಕ್ರವಾರ ಸಂಜೆ ಸಾಧಾರಣ ಮಳೆಯಾಗಿದೆ. ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೂ ಬಿಸಿಲಿನ ವಾತಾವರಣ ಇತ್ತು. ಸಂಜೆ ಇದ್ದಕ್ಕಿದ್ದಂತೆಯೇ ಮೋಡ ಕವಿದು ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>