ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಣ ಸಚಿವ ಇಂದು ಬೀದರ್‌ಗೆ

ರೋಟರಿ ಕ್ಲಬ್‍ನಿಂದ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
Last Updated 28 ಸೆಪ್ಟೆಂಬರ್ 2020, 19:30 IST
ಅಕ್ಷರ ಗಾತ್ರ

ಬೀದರ್: ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್ ಕುಮಾರ್ ಸೆ.29ರಂದು ಬೀದರ್‌ ಜಿಲ್ಲೆಗೆ ಬರಲಿದ್ದಾರೆ.

ಕಲಬುರ್ಗಿಯಿಂದ ಹೊರಟು ಬೆಳಿಗ್ಗೆ 8 ಗಂಟೆಗೆ ಹೊರಟು 10 ಗಂಟೆಗೆ ಬೀದರ್‌ಗೆ ಬರುವರು. ನಂತರ ಬೀದರ್ ತಾಲ್ಲೂಕಿನ ಯಾಕತಪುರದ ಇನ್ಫಂಟ್‌ ಜೀಸಸ್‌ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ಕೊಟ್ಟು ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸುವರು. ಪಾಲಕರೊಂದಿಗೂ ಸಮಾಲೋಚನೆ ನಡೆಸಲಿದ್ದಾರೆ.

ತದನಂತರ ಕಮಲನಗರ ತಾಲ್ಲೂಕಿನ ತೋರಣಾದ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಕಮಲನಗರದ ಸಿದ್ದಗಂಗಮ್ಮ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ಕೊಟ್ಟು ಗಾಮಸ್ಥರು ಹಾಗೂ ವಿದ್ಯಾರ್ಥಿಗಳ ಸಮಸ್ಯೆ ಆಲಿಸಲಿದ್ದಾರೆ. ನಂತರ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸುವ ಸಾಧ್ಯತೆ ಇದೆ.

ಸಂಜೆ 4 ಗಂಟೆಗೆ ಬೀದರ್‌ಗೆ ಬಂದು ಹುಮನಾಬಾದ್‌ ಮಾರ್ಗವಾಗಿ ಕಲಬುರ್ಗಿಗೆ ತೆರಳಿ ವಾಸ್ತವ್ಯ ಮಾಡಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಚಿದಂಬರ ಪಿ.ಎಂ. ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT