<p><strong>ಬೀದರ್:</strong> ‘ಸಾಹಿತ್ಯ ಹಾಗೂ ಆಧ್ಯಾತ್ಮ ಒಂದಕ್ಕೊಂದು ಪೂರಕವಾಗಿವೆ. ಆದ್ದರಿಂದ ಮಕ್ಕಳಿಗೆ ಸಾಹಿತ್ಯ ಹಾಗೂ ಆಧ್ಯಾತ್ಮ ಒಳಗೊಂಡ ಶಿಕ್ಷಣ ನೀಡಬೇಕು’ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಶೀಲಾ ಬಿರಾದಾರ ಅಭಿಪ್ರಾಯ ಪಟ್ಟರು.</p>.<p>ನಗರದ ಮಹಾಲಕ್ಷ್ಮಿ ಸಭಾಂಗಣದಲ್ಲಿ ಕದಂಬ ಕನ್ನಡ ಸಂಘದ ವತಿಯಿಂದ ಭಾನುವಾರ ಆಯೋಜಿಸಿದ್ದ ಸಾಹಿತ್ಯೋತ್ಸವದಲ್ಲಿ ಅವರು ಮಾತನಾಡಿದರು.</p>.<p>‘ಆಧ್ಯಾತ್ಮ ಹಾಗೂ ಸಾಹಿತ್ಯ ಸೂರ್ಯ, ಚಂದ್ರನಿದ್ದಂತೆ. ಆಧ್ಯಾತ್ಮವನ್ನು ಅನುಭವಿಸಬೇಕು. ಸಾಹಿತ್ಯವನ್ನು ಆಸ್ವಾಧಿಸಬೇಕು’ ಎಂದರು.</p>.<p>‘ಅಲ್ಲಮಪ್ರಭುದೇವರು-ಆಧ್ಯಾತ್ಮ’ ಕುರಿತು ಉಪನ್ಯಾಸ ನೀಡಿದ ರೇಣುಕಾ ಎನ್.ಬಿ,‘ ಅಲ್ಲಮಪ್ರಭುದೇವರ ವಚನಗಳಲ್ಲಿ ಸಾಮಾನ್ಯ ಮನುಷ್ಯನು ಆತ್ಮಾವಲೋಕನ ಹಾಗೂ ಆತ್ಮ ವಿಕಾಸ ತತ್ವವನ್ನು ಕಾಣಬಹುದು’ ಎಂದರು.</p>.<p>ರೇಣುಕಾ ಮಳ್ಳಿ ವರಕವಿ ಬೇಂದ್ರೆ ಬದುಕು-ಬರಹ ವಿಷಯ ಕುರಿತು ಉಪನ್ಯಾಸ ನೀಡಿದರು. ಕದಂಬ ಕನ್ನಡ ಸಂಘದ ಅಧ್ಯಕ್ಷ ವೀರಶೆಟ್ಟಿ ಮೈಲೂರಕರ್ ಪ್ರಾಸ್ತಾವಿಕವಾಗು ಮಾತನಾಡಿದರು.</p>.<p>ಸಂಘದ ಗೌರವ ಅಧ್ಯಕ್ಷ ಪ್ರೊ.ಸಿದ್ರಾಮಪ್ಪ ಮಾಸಿಮಾಡೆ ಅಧ್ಯಕ್ಷತೆ ವಹಿಸಿದ್ದರು. ಶ್ರೀಕಾಂತ ಬಿರಾದಾರ ವಚನ ಗಾಯನ ನಡೆಸಿಕೊಟ್ಟರು. ಬಸವ ಸ್ವರಚಿತ ಕವನ ವಾಚಿಸಿದರು. ಪ್ರೊ.ರಾಜಶೇಖರ ಮಂಗಲಗಿ ಸ್ವಾಗತಿಸಿದರು. ಗಂಗಶೆಟ್ಟಿ ಪಾಟೀಲ ನಿರೂಪಿಸಿದರು. ಶಿವನಾಥ ಸ್ವಾಮಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ‘ಸಾಹಿತ್ಯ ಹಾಗೂ ಆಧ್ಯಾತ್ಮ ಒಂದಕ್ಕೊಂದು ಪೂರಕವಾಗಿವೆ. ಆದ್ದರಿಂದ ಮಕ್ಕಳಿಗೆ ಸಾಹಿತ್ಯ ಹಾಗೂ ಆಧ್ಯಾತ್ಮ ಒಳಗೊಂಡ ಶಿಕ್ಷಣ ನೀಡಬೇಕು’ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಶೀಲಾ ಬಿರಾದಾರ ಅಭಿಪ್ರಾಯ ಪಟ್ಟರು.</p>.<p>ನಗರದ ಮಹಾಲಕ್ಷ್ಮಿ ಸಭಾಂಗಣದಲ್ಲಿ ಕದಂಬ ಕನ್ನಡ ಸಂಘದ ವತಿಯಿಂದ ಭಾನುವಾರ ಆಯೋಜಿಸಿದ್ದ ಸಾಹಿತ್ಯೋತ್ಸವದಲ್ಲಿ ಅವರು ಮಾತನಾಡಿದರು.</p>.<p>‘ಆಧ್ಯಾತ್ಮ ಹಾಗೂ ಸಾಹಿತ್ಯ ಸೂರ್ಯ, ಚಂದ್ರನಿದ್ದಂತೆ. ಆಧ್ಯಾತ್ಮವನ್ನು ಅನುಭವಿಸಬೇಕು. ಸಾಹಿತ್ಯವನ್ನು ಆಸ್ವಾಧಿಸಬೇಕು’ ಎಂದರು.</p>.<p>‘ಅಲ್ಲಮಪ್ರಭುದೇವರು-ಆಧ್ಯಾತ್ಮ’ ಕುರಿತು ಉಪನ್ಯಾಸ ನೀಡಿದ ರೇಣುಕಾ ಎನ್.ಬಿ,‘ ಅಲ್ಲಮಪ್ರಭುದೇವರ ವಚನಗಳಲ್ಲಿ ಸಾಮಾನ್ಯ ಮನುಷ್ಯನು ಆತ್ಮಾವಲೋಕನ ಹಾಗೂ ಆತ್ಮ ವಿಕಾಸ ತತ್ವವನ್ನು ಕಾಣಬಹುದು’ ಎಂದರು.</p>.<p>ರೇಣುಕಾ ಮಳ್ಳಿ ವರಕವಿ ಬೇಂದ್ರೆ ಬದುಕು-ಬರಹ ವಿಷಯ ಕುರಿತು ಉಪನ್ಯಾಸ ನೀಡಿದರು. ಕದಂಬ ಕನ್ನಡ ಸಂಘದ ಅಧ್ಯಕ್ಷ ವೀರಶೆಟ್ಟಿ ಮೈಲೂರಕರ್ ಪ್ರಾಸ್ತಾವಿಕವಾಗು ಮಾತನಾಡಿದರು.</p>.<p>ಸಂಘದ ಗೌರವ ಅಧ್ಯಕ್ಷ ಪ್ರೊ.ಸಿದ್ರಾಮಪ್ಪ ಮಾಸಿಮಾಡೆ ಅಧ್ಯಕ್ಷತೆ ವಹಿಸಿದ್ದರು. ಶ್ರೀಕಾಂತ ಬಿರಾದಾರ ವಚನ ಗಾಯನ ನಡೆಸಿಕೊಟ್ಟರು. ಬಸವ ಸ್ವರಚಿತ ಕವನ ವಾಚಿಸಿದರು. ಪ್ರೊ.ರಾಜಶೇಖರ ಮಂಗಲಗಿ ಸ್ವಾಗತಿಸಿದರು. ಗಂಗಶೆಟ್ಟಿ ಪಾಟೀಲ ನಿರೂಪಿಸಿದರು. ಶಿವನಾಥ ಸ್ವಾಮಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>