ಕಲಬುರಗಿಯ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಶರಣಬಸವಪ್ಪ ಅಪ್ಪ, ದಾಕ್ಷಾಯಣಿ ಎಸ್.ಅಪ್ಪ, ಚಿ. ದೊಡ್ಡಪ್ಪ ಅಪ್ಪ, ಕಾರ್ಯದರ್ಶಿ ಬಸವರಾಜ ದೇಶಮುಖ ಹಾಗೂ ನಿರ್ದೇಶಕ ಶರಣಬಸಪ್ಪ ದೇಶಮುಖ ಅವರ ಪ್ರೇರಣೆಯಿಂದ ಸಂಸ್ಥೆಯ ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಸೂತ್ರ ತಿಳಿಸುವ ಹಾಗೂ ಸಾಧನೆಗೆ ಪ್ರೇರೇಪಿಸುವ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಶರಣಬಸವೇಶ್ವರ ವಸತಿ ವಿಜ್ಞಾನ, ಕಲಾ ಹಾಗೂ ವಾಣಿಜ್ಯ ಕಾಲೇಜು ಪ್ರಾಚಾರ್ಯ ಡಾ. ಸತೀಶ ಪ್ರತಾಪುರ ಹೇಳಿದರು.