<p><strong>ಹುಮನಾಬಾದ್</strong>: ಮಾರುಕಟ್ಟೆಯಲ್ಲಿ ಮೊಟ್ಟೆ ದರ ಹೆಚ್ಚಳವಾಗಿದ್ದರಿಂದ ಪ್ರಾಥಮಿಕ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ ಹೊರೆಯಾಗಿ ಪರಿಣಮಿಸಿದೆ.</p>.<p>1ನೇ ತರಗತಿಯಿಂದ 10ನೇ ತರಗತಿ ವರೆಗಿನ ಸರ್ಕಾರಿ ಹಾಗೂ ಅನುದಾನಿತ ಶಾಲೆಯ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಬೇಯಿಸಿದ ಮೊಟ್ಟೆ ವಿತರಣೆ ಮಾಡಬೇಕು ಎಂಬ ಸರ್ಕಾರದ ಆದೇಶ ಇದೆ .</p>.<p>ಶಾಲೆಗಳಿಗೆ ಸರ್ಕಾರದಿಂದ ನೀಡುತ್ತಿರುವ ಅನುದಾನ ಸಾಕಾಗದೇ ಮುಖ್ಯಶಿಕ್ಷಕರು ತಮ್ಮ ಸ್ವಂತ ಹಣ ನೀಡುವ ಪರಿಸ್ಥಿತಿ ಬಂದಿದೆ.</p>.<p>ಶಾಲಾಭಿವೃದ್ಧಿ ಸಮಿತಿ ಹಾಗೂ ಮುಖ್ಯಶಿಕ್ಷಕರ ಜಂಟಿ ಬ್ಯಾಂಕ್ ಖಾತೆಗೆ ಸರ್ಕಾರದಿಂದ ಹಣ ತುಂಬಲಾಗುತ್ತಿದೆ. ಒಂದು ಮೊಟ್ಟೆಗೆ ಸರ್ಕಾರ ₹6 ರೂಪಾಯಿ ನೀಡುತ್ತಿದೆ. ಇದರಲ್ಲಿ ಮೊಟ್ಟೆ ಸುಲಿಯುವುದಕ್ಕೆ 30ಪೈಸೆ, ಸರಬರಾಜು ಮಾಡುವುದಕ್ಕೆ 20ಪೈಸೆ ಹಾಗೂ ಬೇಯಿಸಲು 30ಪೈಸೆ ಬಳಸಬೇಕಾಗಿದೆ. ಇನ್ನುಳಿದ 5.20ರಲ್ಲಿಯೇ ಮೊಟ್ಟೆ ಖರೀದಿಸುವ ಪರಿಸ್ಥಿತಿ ಇವರದ್ದಾಗಿದೇ. ಸದ್ಯ ಮಾರುಕಟ್ಟೆಯಲ್ಲಿ ಒಂದು ಮೊಟ್ಟೆಗೆ ₹7.50 ಪೈಸೆ ಇದೆ. ದಿನದಿಂದ ದಿನಕ್ಕೆ ಮೊಟ್ಟೆ ಬೆಲೆ ವಿಭಿನ್ನವಾಗಿರುತ್ತದೆ. ಹೀಗಾಗಿ ಸರ್ಕಾರದಿಂದ ನೀಡುತ್ತಿರುವ ಅನುದಾನದಲ್ಲಿ ಮೊಟ್ಟೆ ಖರೀದಿ ಮಾಡುವುದು ಕಷ್ಟವಾಗುತ್ತಿದೆ ಎಂದು ಹೆಸರು ಹೇಳಲು ಇಚ್ಛಿಸದ ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರೊಬ್ಬರು ಹೇಳುತ್ತಾರೆ.</p>.<p>’ಸರ್ಕಾರದಿಂದ ವಾರದಲ್ಲಿ ಎರಡು ದಿನ ಮೊಟ್ಟೆ ವಿತರಣೆ ಮಾಡಲಾಗುತ್ತಿತ್ತು. ಈಗ ಅಜೀಂ ಪ್ರೇಮ್ಜಿ ಫೌಂಡೇಷನ್ ನೆರವಿನಿಂದ ವಾರದಲ್ಲಿ 6 ದಿನವೂ ಮೊಟ್ಟೆ ವಿತರಿಸಲಾಗುತ್ತಿದೆ. ಒಂದು ಮೊಟ್ಟೆಗೆ ₹7 ಕೊಟ್ಟರೆ ಮುಖ್ಯಶಿಕ್ಷಕರಿಗೆ ಹೊರೆ ಆಗುವುದಿಲ್ಲ’ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಮುರುಘೇಂದ್ರ ಸಜ್ಜನಶಟ್ಟಿ ತಿಳಿಸಿದ್ದಾರೆ.</p>.<p>ಮೊಟ್ಟೆ ಸೇವಿಸದ ಮಕ್ಕಳಿಗೆ ಬಾಳೆಹಣ್ಣು ಕೊಡಬೇಕು. ಈಗ ಮಾರುಕಟ್ಟೆಯಲ್ಲಿ ಬಾಳೆಹಣ್ಣಿನ ಬೆಲೆಯೂ ಹೆಚ್ಚಾಗಿದೆ. ಹೀಗಾಗಿ ಮೊಟ್ಟೆ ವಿತರಣೆಗೆ ಸರ್ಕಾರ ನೀಡುತ್ತಿರುವ ಅನುದಾನ ಹೆಚ್ಚಳ ಮಾಡಬೇಕು ಎಂಬುವುದು ಶಾಲೆಯ ಮುಖ್ಯ ಶಿಕ್ಷಕರ ಒತ್ತಾಯವಾಗಿದೆ.</p>.<div><blockquote>ಸದ್ಯ ಮಾರುಕಟ್ಟೆಯಲ್ಲಿ ಬಾಳೆಹಣ್ಣು ಮತ್ತು ಮೊಟ್ಟೆ ದರ ಹೆಚ್ಚಳವಾಗಿದೆ. ಇದರಿಂದ ಮುಖ್ಯ ಶಿಕ್ಷಕರಿಗೆ ಇದು ಹೊರೆಯಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಗಮನ ಹರಿಸಬೇಕಾಗಿದೆ</blockquote><span class="attribution">ಶರದಕುಮಾರ್ ಪ್ರೌಢಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ</span></div>.<div><blockquote>ಅನುದಾನಕ್ಕಿಂತ ಹೆಚ್ಚಿನ ಹಣ ಖರ್ಚಾಗುತ್ತಿರುವುದು ಗಮನಕ್ಕೆ ಬಂದಿದ್ದು ಮೇಲಾಧಿಕಾರಿಗಳಿಗೆ ತಿಳಿಸಲಾಗಿದೆ.</blockquote><span class="attribution">ಮಹಾವೀರ ಜಮಖಂಡಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಮನಾಬಾದ್</strong>: ಮಾರುಕಟ್ಟೆಯಲ್ಲಿ ಮೊಟ್ಟೆ ದರ ಹೆಚ್ಚಳವಾಗಿದ್ದರಿಂದ ಪ್ರಾಥಮಿಕ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ ಹೊರೆಯಾಗಿ ಪರಿಣಮಿಸಿದೆ.</p>.<p>1ನೇ ತರಗತಿಯಿಂದ 10ನೇ ತರಗತಿ ವರೆಗಿನ ಸರ್ಕಾರಿ ಹಾಗೂ ಅನುದಾನಿತ ಶಾಲೆಯ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಬೇಯಿಸಿದ ಮೊಟ್ಟೆ ವಿತರಣೆ ಮಾಡಬೇಕು ಎಂಬ ಸರ್ಕಾರದ ಆದೇಶ ಇದೆ .</p>.<p>ಶಾಲೆಗಳಿಗೆ ಸರ್ಕಾರದಿಂದ ನೀಡುತ್ತಿರುವ ಅನುದಾನ ಸಾಕಾಗದೇ ಮುಖ್ಯಶಿಕ್ಷಕರು ತಮ್ಮ ಸ್ವಂತ ಹಣ ನೀಡುವ ಪರಿಸ್ಥಿತಿ ಬಂದಿದೆ.</p>.<p>ಶಾಲಾಭಿವೃದ್ಧಿ ಸಮಿತಿ ಹಾಗೂ ಮುಖ್ಯಶಿಕ್ಷಕರ ಜಂಟಿ ಬ್ಯಾಂಕ್ ಖಾತೆಗೆ ಸರ್ಕಾರದಿಂದ ಹಣ ತುಂಬಲಾಗುತ್ತಿದೆ. ಒಂದು ಮೊಟ್ಟೆಗೆ ಸರ್ಕಾರ ₹6 ರೂಪಾಯಿ ನೀಡುತ್ತಿದೆ. ಇದರಲ್ಲಿ ಮೊಟ್ಟೆ ಸುಲಿಯುವುದಕ್ಕೆ 30ಪೈಸೆ, ಸರಬರಾಜು ಮಾಡುವುದಕ್ಕೆ 20ಪೈಸೆ ಹಾಗೂ ಬೇಯಿಸಲು 30ಪೈಸೆ ಬಳಸಬೇಕಾಗಿದೆ. ಇನ್ನುಳಿದ 5.20ರಲ್ಲಿಯೇ ಮೊಟ್ಟೆ ಖರೀದಿಸುವ ಪರಿಸ್ಥಿತಿ ಇವರದ್ದಾಗಿದೇ. ಸದ್ಯ ಮಾರುಕಟ್ಟೆಯಲ್ಲಿ ಒಂದು ಮೊಟ್ಟೆಗೆ ₹7.50 ಪೈಸೆ ಇದೆ. ದಿನದಿಂದ ದಿನಕ್ಕೆ ಮೊಟ್ಟೆ ಬೆಲೆ ವಿಭಿನ್ನವಾಗಿರುತ್ತದೆ. ಹೀಗಾಗಿ ಸರ್ಕಾರದಿಂದ ನೀಡುತ್ತಿರುವ ಅನುದಾನದಲ್ಲಿ ಮೊಟ್ಟೆ ಖರೀದಿ ಮಾಡುವುದು ಕಷ್ಟವಾಗುತ್ತಿದೆ ಎಂದು ಹೆಸರು ಹೇಳಲು ಇಚ್ಛಿಸದ ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರೊಬ್ಬರು ಹೇಳುತ್ತಾರೆ.</p>.<p>’ಸರ್ಕಾರದಿಂದ ವಾರದಲ್ಲಿ ಎರಡು ದಿನ ಮೊಟ್ಟೆ ವಿತರಣೆ ಮಾಡಲಾಗುತ್ತಿತ್ತು. ಈಗ ಅಜೀಂ ಪ್ರೇಮ್ಜಿ ಫೌಂಡೇಷನ್ ನೆರವಿನಿಂದ ವಾರದಲ್ಲಿ 6 ದಿನವೂ ಮೊಟ್ಟೆ ವಿತರಿಸಲಾಗುತ್ತಿದೆ. ಒಂದು ಮೊಟ್ಟೆಗೆ ₹7 ಕೊಟ್ಟರೆ ಮುಖ್ಯಶಿಕ್ಷಕರಿಗೆ ಹೊರೆ ಆಗುವುದಿಲ್ಲ’ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಮುರುಘೇಂದ್ರ ಸಜ್ಜನಶಟ್ಟಿ ತಿಳಿಸಿದ್ದಾರೆ.</p>.<p>ಮೊಟ್ಟೆ ಸೇವಿಸದ ಮಕ್ಕಳಿಗೆ ಬಾಳೆಹಣ್ಣು ಕೊಡಬೇಕು. ಈಗ ಮಾರುಕಟ್ಟೆಯಲ್ಲಿ ಬಾಳೆಹಣ್ಣಿನ ಬೆಲೆಯೂ ಹೆಚ್ಚಾಗಿದೆ. ಹೀಗಾಗಿ ಮೊಟ್ಟೆ ವಿತರಣೆಗೆ ಸರ್ಕಾರ ನೀಡುತ್ತಿರುವ ಅನುದಾನ ಹೆಚ್ಚಳ ಮಾಡಬೇಕು ಎಂಬುವುದು ಶಾಲೆಯ ಮುಖ್ಯ ಶಿಕ್ಷಕರ ಒತ್ತಾಯವಾಗಿದೆ.</p>.<div><blockquote>ಸದ್ಯ ಮಾರುಕಟ್ಟೆಯಲ್ಲಿ ಬಾಳೆಹಣ್ಣು ಮತ್ತು ಮೊಟ್ಟೆ ದರ ಹೆಚ್ಚಳವಾಗಿದೆ. ಇದರಿಂದ ಮುಖ್ಯ ಶಿಕ್ಷಕರಿಗೆ ಇದು ಹೊರೆಯಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಗಮನ ಹರಿಸಬೇಕಾಗಿದೆ</blockquote><span class="attribution">ಶರದಕುಮಾರ್ ಪ್ರೌಢಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ</span></div>.<div><blockquote>ಅನುದಾನಕ್ಕಿಂತ ಹೆಚ್ಚಿನ ಹಣ ಖರ್ಚಾಗುತ್ತಿರುವುದು ಗಮನಕ್ಕೆ ಬಂದಿದ್ದು ಮೇಲಾಧಿಕಾರಿಗಳಿಗೆ ತಿಳಿಸಲಾಗಿದೆ.</blockquote><span class="attribution">ಮಹಾವೀರ ಜಮಖಂಡಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>