<p><strong>ಬೀದರ್:</strong> ನಗರ ಸೇರಿದಂತೆ ಜಿಲ್ಲೆಯಾದ್ಯಂತ ಶನಿವಾರ ಈದ್–ಉಲ್–ಫಿತ್ರ್ ಹಬ್ಬವನ್ನು ಅತ್ಯಂತ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.</p><p>ಪವಿತ್ರ ರಂಜಾನ್ ತಿಂಗಳ ಉಪವಾಸ ವ್ರತವನ್ನು ಪೂರ್ಣಗೊಳಿಸಿದ ಮುಸ್ಲಿಮರು ಶ್ರದ್ಧಾ, ಭಕ್ತಿಯಿಂದ ಈದ್ ಆಚರಿಸಿದರು. ಶುಕ್ರವಾರ ಸಂಜೆ ಆಕಾಶದಲ್ಲಿ ಚಂದ್ರನ ದರ್ಶನವಾಗುತ್ತಿದ್ದಂತೆ ಮುಸ್ಲಿಂ ಧರ್ಮೀಯರಲ್ಲಿ ಸಂಭ್ರಮ ಮನೆ ಮಾಡಿತು. ಹಬ್ಬದ ಸಡಗರ ಹೆಚ್ಚಾಯಿತು. ಹಬ್ಬ ಅಧಿಕೃತವಾದ ವಿಷಯ ಗೊತ್ತಾಗುತ್ತಿದ್ದಂತೆ ಅಂತಿಮ ಹಂತದ ಸಿದ್ಧತೆ ಮಾಡಿಕೊಂಡರು. </p><p>ಶನಿವಾರ ಬೆಳಕು ಹರಿಯುತ್ತಿದ್ದಂತೆ ಶ್ವೇತ ವರ್ಣದ ಉಡುಪು, ತಲೆಯ ಮೇಲೆ ‘ತಾಜ್’ ಧರಿಸಿ ಮನೆಯಲ್ಲಿ ಪ್ರಾರ್ಥನೆ ಮಾಡಿದರು. ‘ಕುರಾನ್’ ಪಠಣ ಮಾಡಿದರು. ಬಳಿಕ ಗಂಡು ಮಕ್ಕಳು ಬೈಕ್, ಕಾರು, ಟೆಂಪೊ, ಬಸ್ ಸೇರಿದಂತೆ ಇತರೆ ವಾಹನಗಳಲ್ಲಿ ಜಯಘೋಷ ಹಾಕುತ್ತ ಈದ್ಗಾ ಮೈದಾನಗಳಿಗೆ ತೆರಳಿ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡರು.</p><p>ಪ್ರತಿ ವರ್ಷದಂತೆ ಈ ವರ್ಷವೂ ನಗರದ ಕೇಂದ್ರ ಬಸ್ ನಿಲ್ದಾಣ ಎದುರಿನ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಗೆ ಹೆಚ್ಚಿನ ಜನ ಸಾಕ್ಷಿಯಾದರು. ಮೌಲ್ವಿಗಳು ಪ್ರಾರ್ಥನೆ ನಡೆಸಿಕೊಟ್ಟರು. ಪ್ರಾರ್ಥನೆ ಬಳಿಕ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಬಡವರಿಗೆ ದಾನ ಮಾಡಿದರು. </p><p>ಪೌರಾಡಳಿತ ಸಚಿವ ರಹೀಂ ಖಾನ್, ಬೀದರ್ ಮಹಾನಗರ ಪಾಲಿಕೆಯ ಆಯುಕ್ತ ಮುಹಮ್ಮದ್ ಗೌಸ್, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಮಾಜಿಸಚಿವ ಬಂಡೆಪ್ಪ ಕಾಶೆಂಪುರ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದತ್ತು ಮೂಲಗೆ ಅವರು ಪ್ರಾರ್ಥನೆಯಲ್ಲಿ ಪಾಲ್ಗೊಂಡವರಿಗೆ ಶುಭಾಶಯ ತಿಳಿಸಿದರು. ನಗರದ ಚಿದ್ರಿ, ಜನವಾಡ ರಸ್ತೆ, ಅಷ್ಟೂರ್ ರಸ್ತೆ, ಹೈದರಾಬಾದ್ ರಸ್ತೆ, ಚಿಟ್ಟಾ ಹಾಗೂ ಅಮಲಾಪೂರ ರಸ್ತೆಯ ಈದ್ಗಾ ಮೈದಾನಗಳಲ್ಲೂ ಸಾಮೂಹಿಕ ಪ್ರಾರ್ಥನೆ ನಡೆಯಿತು. ಬಳಿಕ ಮನೆಗೆ ತೆರಳಿ, ಮಗದೊಮ್ಮೆ ದೇವರ ಪ್ರಾರ್ಥನೆ ಮಾಡಿ, ಸಾಮೂಹಿಕವಾಗಿ ಭೋಜನ ಸವಿದರು. ಬಂಧು–ಬಳಗದವರು, ಸ್ನೇಹಿತರನ್ನು ಮನೆಗೆ ಆಹ್ವಾನಿಸಿ, ಬಿರಿಯಾನಿ, ಸುರ್ಕುಂಬಾ (ಶಾವಿಗೆ ಸಿಹಿ ಪದಾರ್ಥ) ಉಣಬಡಿಸಿದರು. </p><p>ಈದ್ ಹಬ್ಬ ಮುಸ್ಲಿಮರ ಅತಿದೊಡ್ಡ ಹಬ್ಬ. ಎಲ್ಲರೂ ಹಬ್ಬದ ಸಂಭ್ರಮದಲ್ಲಿ ಇದ್ದದ್ದರಿಂದ ಶನಿವಾರ ನಗರದ ಓಲ್ಡ್ ಸಿಟಿಯಲ್ಲಿ ಮುಸ್ಲಿಮರ ಬಹುತೇಕ ಮಳಿಗೆಗಳು ಬಂದ್ ಆಗಿದ್ದವು. ಮಧ್ಯಾಹ್ನದ ನಂತರ ಪ್ರಖರವಾದ ಬಿಸಿಲು ಇದ್ದದ್ದರಿಂದ ಹೆಚ್ಚಿನ ಜನ ಹೊರಬರಲಿಲ್ಲ. ಇದರಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಜನರಿಲ್ಲದೇ ಬಿಕೋ ಎನ್ನುತ್ತಿತ್ತು. ಜಿಲ್ಲೆಯ ಇತರೆಡೆಗಳಲ್ಲೂ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ನಗರ ಸೇರಿದಂತೆ ಜಿಲ್ಲೆಯಾದ್ಯಂತ ಶನಿವಾರ ಈದ್–ಉಲ್–ಫಿತ್ರ್ ಹಬ್ಬವನ್ನು ಅತ್ಯಂತ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.</p><p>ಪವಿತ್ರ ರಂಜಾನ್ ತಿಂಗಳ ಉಪವಾಸ ವ್ರತವನ್ನು ಪೂರ್ಣಗೊಳಿಸಿದ ಮುಸ್ಲಿಮರು ಶ್ರದ್ಧಾ, ಭಕ್ತಿಯಿಂದ ಈದ್ ಆಚರಿಸಿದರು. ಶುಕ್ರವಾರ ಸಂಜೆ ಆಕಾಶದಲ್ಲಿ ಚಂದ್ರನ ದರ್ಶನವಾಗುತ್ತಿದ್ದಂತೆ ಮುಸ್ಲಿಂ ಧರ್ಮೀಯರಲ್ಲಿ ಸಂಭ್ರಮ ಮನೆ ಮಾಡಿತು. ಹಬ್ಬದ ಸಡಗರ ಹೆಚ್ಚಾಯಿತು. ಹಬ್ಬ ಅಧಿಕೃತವಾದ ವಿಷಯ ಗೊತ್ತಾಗುತ್ತಿದ್ದಂತೆ ಅಂತಿಮ ಹಂತದ ಸಿದ್ಧತೆ ಮಾಡಿಕೊಂಡರು. </p><p>ಶನಿವಾರ ಬೆಳಕು ಹರಿಯುತ್ತಿದ್ದಂತೆ ಶ್ವೇತ ವರ್ಣದ ಉಡುಪು, ತಲೆಯ ಮೇಲೆ ‘ತಾಜ್’ ಧರಿಸಿ ಮನೆಯಲ್ಲಿ ಪ್ರಾರ್ಥನೆ ಮಾಡಿದರು. ‘ಕುರಾನ್’ ಪಠಣ ಮಾಡಿದರು. ಬಳಿಕ ಗಂಡು ಮಕ್ಕಳು ಬೈಕ್, ಕಾರು, ಟೆಂಪೊ, ಬಸ್ ಸೇರಿದಂತೆ ಇತರೆ ವಾಹನಗಳಲ್ಲಿ ಜಯಘೋಷ ಹಾಕುತ್ತ ಈದ್ಗಾ ಮೈದಾನಗಳಿಗೆ ತೆರಳಿ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡರು.</p><p>ಪ್ರತಿ ವರ್ಷದಂತೆ ಈ ವರ್ಷವೂ ನಗರದ ಕೇಂದ್ರ ಬಸ್ ನಿಲ್ದಾಣ ಎದುರಿನ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಗೆ ಹೆಚ್ಚಿನ ಜನ ಸಾಕ್ಷಿಯಾದರು. ಮೌಲ್ವಿಗಳು ಪ್ರಾರ್ಥನೆ ನಡೆಸಿಕೊಟ್ಟರು. ಪ್ರಾರ್ಥನೆ ಬಳಿಕ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಬಡವರಿಗೆ ದಾನ ಮಾಡಿದರು. </p><p>ಪೌರಾಡಳಿತ ಸಚಿವ ರಹೀಂ ಖಾನ್, ಬೀದರ್ ಮಹಾನಗರ ಪಾಲಿಕೆಯ ಆಯುಕ್ತ ಮುಹಮ್ಮದ್ ಗೌಸ್, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಮಾಜಿಸಚಿವ ಬಂಡೆಪ್ಪ ಕಾಶೆಂಪುರ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದತ್ತು ಮೂಲಗೆ ಅವರು ಪ್ರಾರ್ಥನೆಯಲ್ಲಿ ಪಾಲ್ಗೊಂಡವರಿಗೆ ಶುಭಾಶಯ ತಿಳಿಸಿದರು. ನಗರದ ಚಿದ್ರಿ, ಜನವಾಡ ರಸ್ತೆ, ಅಷ್ಟೂರ್ ರಸ್ತೆ, ಹೈದರಾಬಾದ್ ರಸ್ತೆ, ಚಿಟ್ಟಾ ಹಾಗೂ ಅಮಲಾಪೂರ ರಸ್ತೆಯ ಈದ್ಗಾ ಮೈದಾನಗಳಲ್ಲೂ ಸಾಮೂಹಿಕ ಪ್ರಾರ್ಥನೆ ನಡೆಯಿತು. ಬಳಿಕ ಮನೆಗೆ ತೆರಳಿ, ಮಗದೊಮ್ಮೆ ದೇವರ ಪ್ರಾರ್ಥನೆ ಮಾಡಿ, ಸಾಮೂಹಿಕವಾಗಿ ಭೋಜನ ಸವಿದರು. ಬಂಧು–ಬಳಗದವರು, ಸ್ನೇಹಿತರನ್ನು ಮನೆಗೆ ಆಹ್ವಾನಿಸಿ, ಬಿರಿಯಾನಿ, ಸುರ್ಕುಂಬಾ (ಶಾವಿಗೆ ಸಿಹಿ ಪದಾರ್ಥ) ಉಣಬಡಿಸಿದರು. </p><p>ಈದ್ ಹಬ್ಬ ಮುಸ್ಲಿಮರ ಅತಿದೊಡ್ಡ ಹಬ್ಬ. ಎಲ್ಲರೂ ಹಬ್ಬದ ಸಂಭ್ರಮದಲ್ಲಿ ಇದ್ದದ್ದರಿಂದ ಶನಿವಾರ ನಗರದ ಓಲ್ಡ್ ಸಿಟಿಯಲ್ಲಿ ಮುಸ್ಲಿಮರ ಬಹುತೇಕ ಮಳಿಗೆಗಳು ಬಂದ್ ಆಗಿದ್ದವು. ಮಧ್ಯಾಹ್ನದ ನಂತರ ಪ್ರಖರವಾದ ಬಿಸಿಲು ಇದ್ದದ್ದರಿಂದ ಹೆಚ್ಚಿನ ಜನ ಹೊರಬರಲಿಲ್ಲ. ಇದರಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಜನರಿಲ್ಲದೇ ಬಿಕೋ ಎನ್ನುತ್ತಿತ್ತು. ಜಿಲ್ಲೆಯ ಇತರೆಡೆಗಳಲ್ಲೂ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>