ಔರಾದ್: ಮಹಿಳೆಯೊಬ್ಬರ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದ ಎಂಟು ಜನರನ್ನು ಇಲ್ಲಿನ ಸಂತಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ₹1.20 ಲಕ್ಷ ಮೌಲ್ಯದ ಚಿನ್ನದ ಸರ, ಎರಡು ಬೈಕ್ಗಳನ್ನು ಜಪ್ತಿ ಮಾಡಿದ್ದಾರೆ.
ಈ ಸರಗಳ್ಳರ ತಂಡ ಸಂತಪುರ ಗ್ರಾಮದ ಲಕ್ಷ್ಮಿ ದೇವಸ್ಥಾನದ ಹತ್ತಿರ ಮಂಗಳವಾರ ಅಂಬಿಕಾ ಎಂಬುವರ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಲು ಯತ್ನಿಸಿತ್ತು. ಸುದ್ದಿ ತಿಳಿದ ಪೊಲೀಸರು ಇವರ ಬೆನ್ನಟ್ಟಿ ಸಿನಿಮೀಯ ಮಾದರಿಯಲ್ಲಿ ಬಂಧಿಸಿದ್ದಾರೆ.
ಡಿವೈಎಸ್ಪಿ ದೇವರಾಜ ಅವರ ನೇತೃತ್ವದಲ್ಲಿ ಸಿಪಿಐ ಟಿ.ರಾಘವೇಂದ್ರ, ಪಿಎಸ್ಐ ಪ್ರಭಾಕರ್ ಪಾಟೀಲ, ಸುವರ್ಣ ಹಾಗೂ ಸಿಬ್ಬಂದಿ ತಂಡ ಕಾರ್ಯಾಚರಣೆ ನಡೆಸಿದೆ.