‘ಎಳ್ಳು ಅಮಾವಾಸ್ಯೆ ಹಬ್ಬದ ವೇಳೆ ಹೊಲದಲ್ಲಿ ಕಡಲೆ, ಜೋಳ, ಕುಸುಬೆ, ಅವರೆ ಬೆಳೆ ವಿಫುಲವಾಗಿ ಬೆಳೆದು ಹಚ್ಚ ಹಸಿರಿನಿಂದ ಕಂಗೊಳಿಸುತ್ತಿತ್ತು. ಆದರೆ, ಅದ್ಯಾವುದು ಇಂದು ಹೊಲದಲ್ಲಿ ಕಾಣುತ್ತಿಲ್ಲ. ಸಂಪ್ರದಾಯ ಮುರಿದುಹೋಗಬಾರದು ಎಂಬ ಕಾರಣಕ್ಕೆ ಒಣ, ತೊಗರಿ ಹೊಲದಲ್ಲಿ ಎಳ್ಳ ಅಮಾವಾಸ್ಯೆ ಆಚರಿಸಲಾಗುತ್ತಿದೆ. ಅಕಾಲಿಕ ಮಳೆಯಿಂದ ಅಲ್ಪಸ್ವಲ್ಪ ಬೆಳೆದ ಜೋಳವು ಸಂಪೂರ್ಣವಾಗಿ ನೆಲಕ್ಕೆ ಬಿದ್ದಿದ್ದು. ಎತ್ತಿ ಕಟ್ಟೋಣ ಎಂದರೆ ದಂಟು ಮುರಿದು ಬಿಳುತ್ತಿವೆ ಎಂದು ಸುರೇಶ ಸೇರೆ, ಬಾಲಾಜಿ ಬನವಾಸೆ, ಅಂಕೋಶ, ಚನ್ನಬಸವ ಅನೇಕ ರೈತರು ಅಸಹಾಯಕತೆ ವ್ಯಕ್ತಪಡಿಸುತ್ತಾರೆ.