ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮ ಅಭಿವೃದ್ಧಿಗೆ ಒತ್ತು ಕೊಡಿ

Last Updated 28 ನವೆಂಬರ್ 2022, 14:27 IST
ಅಕ್ಷರ ಗಾತ್ರ

ಬೀದರ್: ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು ಗ್ರಾಮಗಳ ಅಭಿವೃದ್ಧಿಗೆ ಒತ್ತು ಕೊಡಬೇಕು ಎಂದು ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ ಹೇಳಿದರು.

ಅಷ್ಟೂರ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ರೇಣುಕಾ ಮೋರೆ ಹಾಗೂ ಉಪಾಧ್ಯಕ್ಷೆ ಪ್ರೇಮಲಾ ತಾದಲಾಪುರೆ ಅವರನ್ನು ನಗರದ ತಮ್ಮ ಗೃಹ ಕಚೇರಿಯಲ್ಲಿ ಸನ್ಮಾನಿಸಿ ಅವರು ಮಾತನಾಡಿದರು.

ಚುನಾವಣೆಯಲ್ಲಿ ಆಯ್ಕೆಗೊಳಿಸಿದ ಜನರ ಆಶಯಗಳನ್ನು ಈಡೇರಿಸಲು ಶ್ರಮಿಸಬೇಕು ಎಂದರು.

ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರೇಮಲಾ ತಾದಲಾಪುರ, ಸದಸ್ಯರಾದ ಕುಶಾಲರಾವ್ ಅಷ್ಟೂರ, ಕಸ್ತೂರಿಬಾಯಿ, ಸಂಜುಕುಮಾರ, ರಾಹುಲ್ ತಾದಲಾಪುರ, ಶಿವಾನಂದ ತಾದಲಾಪುರ, ಕಾಶೀನಾಥ ವಾಲ್ದೊಡ್ಡಿ, ಸಂಗಶೆಟ್ಟಿ ರಾಮತೀರ್ಥ, ಸಂಗಾರೆಡ್ಡಿ, ಶಂಕ್ರಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT