ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಔರಾದ್: ಅಮರೇಶ್ವರ ದೇವಸ್ಥಾನ ಮಹಾದ್ವಾರ ಶಿಥಿಲ, ಭಕ್ತರಲ್ಲಿ ಆತಂಕ

Last Updated 27 ಸೆಪ್ಟೆಂಬರ್ 2020, 12:24 IST
ಅಕ್ಷರ ಗಾತ್ರ

ಔರಾದ್: ಪಟ್ಟಣದ ಅಮರೇಶ್ವರ ದೇವಸ್ಥಾನ ಅಭಿವೃದ್ಧಿಯಿಂದ ವಂಚಿತವಾಗಿದೆ. ಈ ದೇವಸ್ಥಾನ ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟಿದೆ. ಉಪವಿಭಾಗಾಧಿಕಾರಿ ಆಡಳಿತ ಅಧಿಕಾರಿ ಹಾಗೂ ತಾಲ್ಲೂಕು ದಂಡಾಧಿಕಾರಿ ಕಾರ್ಯದರ್ಶಿಯಾಗಿರುತ್ತಾರೆ.

ಈಚೆಗೆ ಸುರಿದ ಮಳೆಗೆ ದೇವಸ್ಥಾನದ ಕೆಲ ಭಾಗ ಹಾಳಾಗಿದೆ. ಗರ್ಭಗುಡಿ ಎದುರಿನ ಮಂಟಪದಲ್ಲಿ ಮಳೆ ನೀರು ಬರುತ್ತಿದೆ. ಇದರಿಂದ ಭಕ್ತರಿಗೆ ದರ್ಶನ ಪಡೆಯಲು ತೊಂದರೆಯಾಗುತ್ತಿದೆ. ಮಹಾದ್ವಾರದ ಮೇಲೆ ಗಿಡ -ಗಂಟಿ ಬೆಳೆದು ಶಿಥಿಲಾವಸ್ಥೆಗೆ ತಲುಪಿದರೂ ಸಂಬಂಧಿಸಿದವರು ಗಮನಹರಿಸಿಲ್ಲ ಎಂದು ಭಕ್ತರು ಆಕ್ರೋಶ ಹೊರ ಹಾಕಿದ್ದಾರೆ.

‘ಹೊಸದಾಗಿ ಮಹಾದ್ವಾರ ನಿರ್ಮಾಣ ಹಾಗೂ ಕೆಲ ಮಹತ್ವದ ಕಾಮಗಾರಿ ಕೈಗೊಳ್ಳುವಂತೆ ತಹಶೀಲ್ದಾರ್ ಅವರಿಗೆ ಸಾಕಷ್ಟು ಸಲ ಮನವಿ ಮಾಡಿಕೊಳ್ಳಲಾಗಿದೆ. ಇದಕ್ಕಾಗಿ ಭಕ್ತರು ನೀಡಿದ ಹಣವೂ ಇದೆ. ಆದರೂ ಕೆಲಸ ಮಾಡಲು ವಿಳಂಬ ನೀತಿ ಅನುಸರಿಸಲಾಗುತ್ತಿದೆ’ ಎಂದು ಸಾಮಾಜಿಕ ಹೋರಾಟಗಾರ ಗುರುನಾಥ ವಡ್ಡೆ ದೂರಿದ್ದಾರೆ.

‘ಈ ಹಿಂದಿನ ಉಪವಿಭಾಗಾದಿಕಾರಿ ಮಹಾದ್ವಾರ ನಿರ್ಮಾಣಕ್ಕೆ ಟೆಂಡರ್ ಕರೆದು ಕಾಮಗಾರಿ ಆರಂಭಿಸುವುದಾಗಿ ಹೇಳಿದ್ದರು. ಆದರೆ ಲಾಕ್‌ಡೌನ್‌ನಿಂದ ಆ ಕೆಲಸ ನಿಂತಿದೆ. ಈಗ ಹೊಸ ಉಪವಿಭಾಗಾಧಿಕಾರಿ ಬಂದಿದ್ದಾರೆ. ಅವರನ್ನು ಭೇಟಿ ಮಾಡಿ ದೇವಸ್ಥಾನದ ಅಗತ್ಯ ಕಾಮಗಾರಿ ಕೈಗೊಳ್ಳಲು ಮನವಿ ಮಾಡಿಕೊಳ್ಳುವುದಾಗಿ’ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT