<p><strong>ಬೀದರ್</strong>: ಬೀದರ್ನಲ್ಲಿ ಐಟಿ, ಬಿಟಿ ಕಂಪನಿಗಳ ಸ್ಥಾಪನೆಗೆ ಕ್ರಮ ಕೈಗೊಳ್ಳುವುದಾಗಿ ಮಾಹಿತಿ ತಂತ್ರಜ್ಞಾನ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವಥ್ ನಾರಾಯಣ ಭರವಸೆ ನೀಡಿದ್ದಾರೆ ಎಂದು ಸಂಸದ ಭಗವಂತ ಖೂಬಾ ತಿಳಿಸಿದ್ದಾರೆ.</p>.<p>ಬೆಂಗಳೂರಿನಲ್ಲಿ ಶುಕ್ರವಾರ ಅವರನ್ನು ಭೇಟಿಯಾಗಿ ಮಾಡಿದ ಮನವಿಗೆ ಸ್ಪಂದಿಸಿ ಬೀದರ್ನಲ್ಲಿ ಬಂಡವಾಳ ಹೂಡಿಕೆಗೆ ಬಂಡವಾಳದಾರರಿಗೆ ಉತ್ತೇಜನ ನೀಡುವುದಾಗಿ ಆಶ್ವಾಸನೆ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.</p>.<p>ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಎಂಜಿನಿಯರಿಂಗ್, ತಂತ್ರಜ್ಞಾನದ ಜ್ಞಾನ ಇರುವ ಸಾಕಷ್ಟು ಯುವಕರು ಇದ್ದಾರೆ. ಸದ್ಯ ದೂರದ ಬೆಂಗಳೂರಿಗೆ ಬಂದು ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಬೀದರ್ನಲ್ಲೇ ಐಟಿ,ಬಿಟಿ ಕಂಪನಿಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರಲ್ಲಿ ಮನವಿ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.</p>.<p>ಬೀದರ್ನಿಂದ ನಾಗರಿಕ ವಿಮಾನಯಾನ ಸೇವೆ ಸಹ ಆರಂಭವಾಗಿದೆ. ನೆರೆಯ ತೆಲಂಗಾಣದ ಹೈದರಾಬಾದ್ 140 ಕಿ.ಮೀ. ಅಂತರದಲ್ಲಿ ಇದೆ. ಜಿಲ್ಲೆ ಎರಡೂ ರಾಜ್ಯಗಳ ರಾಜಧಾನಿಗಳ ನಡುವೆ ವ್ಯವಹಾರ ಕೇಂದ್ರವಾಗಿದೆ ಎನ್ನುವುದನ್ನು ಮನವರಿಕೆ ಮಾಡಿದ್ದೇನೆ ಎಂದು ಹೇಳಿದ್ದಾರೆ.</p>.<p>ಬೀದರ್ನಲ್ಲಿ ಹೊಸ ತಂತ್ರಜ್ಞಾನ ಆಧಾರಿತ ಐಟಿ, ಬಿಟಿ ಕಂಪನಿಗಳನ್ನು ಸ್ಥಾಪಿಸಿದರೆ ಕಲ್ಯಾಣ ಕರ್ನಾಟಕಕ್ಕೆ ಒಳ್ಳೆಯ ಕೊಡುಗೆಯಾಗಲಿದೆ. ಈ ಭಾಗದ ಯುವಕರಿಗೆ ಪ್ರೋತ್ಸಾಹಿಸಿದಂತೆಯೂ ಆಗಲಿದೆ ಎಂದು ಗಮನ ಸೆಳೆದಿದ್ದೇನೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ಬೀದರ್ನಲ್ಲಿ ಐಟಿ, ಬಿಟಿ ಕಂಪನಿಗಳ ಸ್ಥಾಪನೆಗೆ ಕ್ರಮ ಕೈಗೊಳ್ಳುವುದಾಗಿ ಮಾಹಿತಿ ತಂತ್ರಜ್ಞಾನ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವಥ್ ನಾರಾಯಣ ಭರವಸೆ ನೀಡಿದ್ದಾರೆ ಎಂದು ಸಂಸದ ಭಗವಂತ ಖೂಬಾ ತಿಳಿಸಿದ್ದಾರೆ.</p>.<p>ಬೆಂಗಳೂರಿನಲ್ಲಿ ಶುಕ್ರವಾರ ಅವರನ್ನು ಭೇಟಿಯಾಗಿ ಮಾಡಿದ ಮನವಿಗೆ ಸ್ಪಂದಿಸಿ ಬೀದರ್ನಲ್ಲಿ ಬಂಡವಾಳ ಹೂಡಿಕೆಗೆ ಬಂಡವಾಳದಾರರಿಗೆ ಉತ್ತೇಜನ ನೀಡುವುದಾಗಿ ಆಶ್ವಾಸನೆ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.</p>.<p>ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಎಂಜಿನಿಯರಿಂಗ್, ತಂತ್ರಜ್ಞಾನದ ಜ್ಞಾನ ಇರುವ ಸಾಕಷ್ಟು ಯುವಕರು ಇದ್ದಾರೆ. ಸದ್ಯ ದೂರದ ಬೆಂಗಳೂರಿಗೆ ಬಂದು ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಬೀದರ್ನಲ್ಲೇ ಐಟಿ,ಬಿಟಿ ಕಂಪನಿಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರಲ್ಲಿ ಮನವಿ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.</p>.<p>ಬೀದರ್ನಿಂದ ನಾಗರಿಕ ವಿಮಾನಯಾನ ಸೇವೆ ಸಹ ಆರಂಭವಾಗಿದೆ. ನೆರೆಯ ತೆಲಂಗಾಣದ ಹೈದರಾಬಾದ್ 140 ಕಿ.ಮೀ. ಅಂತರದಲ್ಲಿ ಇದೆ. ಜಿಲ್ಲೆ ಎರಡೂ ರಾಜ್ಯಗಳ ರಾಜಧಾನಿಗಳ ನಡುವೆ ವ್ಯವಹಾರ ಕೇಂದ್ರವಾಗಿದೆ ಎನ್ನುವುದನ್ನು ಮನವರಿಕೆ ಮಾಡಿದ್ದೇನೆ ಎಂದು ಹೇಳಿದ್ದಾರೆ.</p>.<p>ಬೀದರ್ನಲ್ಲಿ ಹೊಸ ತಂತ್ರಜ್ಞಾನ ಆಧಾರಿತ ಐಟಿ, ಬಿಟಿ ಕಂಪನಿಗಳನ್ನು ಸ್ಥಾಪಿಸಿದರೆ ಕಲ್ಯಾಣ ಕರ್ನಾಟಕಕ್ಕೆ ಒಳ್ಳೆಯ ಕೊಡುಗೆಯಾಗಲಿದೆ. ಈ ಭಾಗದ ಯುವಕರಿಗೆ ಪ್ರೋತ್ಸಾಹಿಸಿದಂತೆಯೂ ಆಗಲಿದೆ ಎಂದು ಗಮನ ಸೆಳೆದಿದ್ದೇನೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>