‘ಜಗಳದಲ್ಲಿ ಎರಡೂ ಗುಂಪಿನ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಬಸವಕಲ್ಯಾಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಮೃತ ಬಸವರಾಜ ಅವರು ಗಡಿ ಭದ್ರತಾ ಪಡೆಯಲ್ಲಿ 10 ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.ಸುತ್ತಮುತ್ತಲಿನ ಗ್ರಾಮಗಳಲ್ಲಿ ಸಣ್ಣಪುಟ್ಟ ಜಗಳಗಳಲ್ಲಿ ಭಾಗಿಯಾಗಿದ್ದ ಅವರ ಮೇಲೆ ಕೆಲ ಪ್ರಕರಣಗಳು ದಾಖಲಾಗಿದ್ದವು’ ಎಂದು ಪೊಲೀಸರು ಹೇಳಿದ್ದಾರೆ.