<p><strong>ಔರಾದ್:</strong> ‘ಬಸವಕಲ್ಯಾಣದಲ್ಲಿ ನೂತನ ಅನುಭವ ಮಂಟಪ ನಿರ್ಮಿಸುವ ಭಾಲ್ಕಿ ಮಠದ ಬಸವಲಿಂಗ ಪಟ್ಟದ್ದೇವರ ಎರಡು ದಶಕದ ಸಂಕಲ್ಪ ಈಗ ಸಾಕಾರಗೊಳ್ಳುವ ಸಮಯ ಬಂದಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಹೇಳಿದರು.</p>.<p>ಪಟ್ಟಣದಲ್ಲಿ ಶನಿವಾರ ನಡೆದ ಬಸವಲಿಂಗ ಪಟ್ಟದ್ದೇವರ ಅಭಿನಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಬಸವತತ್ವ ಪ್ರಸಾರವೇ ತಮ್ಮ ಬದುಕಿನ ಅವಿಭಾಜ್ಯ ಅಂಗ ಮಾಡಿಕೊಂಡಿರುವ ಬಸವಲಿಂಗ ಪಟ್ಟದ್ದೇವರು ಕಲ್ಯಾಣದಲ್ಲಿ ಅನುಭವ ಮಂಟಪ ಕಟ್ಟಿಸಿ ಹೊಸ ಅಧ್ಯಾಯ ಬರೆಯಲು ಹೊರಟಿದ್ದಾರೆ. ಅವರ ಈ ಮಹತ್ವದ ಬಯಕೆ ಈಡೇರಿಸಲು ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ₹500 ಕೋಟಿ ಮಂಜೂರು ಮಾಡಲಾಗಿದೆ. ₹2 ಕೋಟಿ ಬಿಡುಗಡೆಯಾಗಿದೆ. ಶೀಘ್ರದಲ್ಲೇ ಕಾಮಗಾರಿ ಶುರುವಾಗಲಿದೆ. ನಿಗದಿಯಂತೆ ಎರಡು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟಿಸಲಾಗುವುದು’ ಎಂದರು.</p>.<p>ಸಾನಿಧ್ಯ ವಹಿಸಿದ ಬಸವಲಿಂಗ ಪಟ್ಟದ್ದೇವರು, ‘ನನಗೆ ದೊರೆತ ಪ್ರಶಸ್ತಿ ಪುರಸ್ಕಾರ ಬಸವ ಭಕ್ತರಿಗೆ ಸಲ್ಲಬೇಕು. ಔರಾದ್ ನನ್ನ ಮಾತೃಭೂಮಿ. ಇಲ್ಲಿಯ ಗುರುಲಿಂಗಪ್ಪ ಘುಳೆ ಹಾಗೂ ರಾಚಪ್ಪ ಮುದ್ದಾ ನನ್ನನ್ನು ಓದಲು ಭಾಲ್ಕಿ ಮಠಕ್ಕೆ ಸೇರಿಸಿದವರು. ಮುಂದೆ ಚನ್ನಬಸವ ಪಟ್ಟದ್ದೇವರ ಆಶೀರ್ವಾದದಿಂದ ಬಸವತತ್ವ ಪ್ರಸಾರ ಮಾಡಲು ವೇದಿಕೆ ದೊರೆಯಿತು’ ಎಂದು ಹೇಳಿದರು.</p>.<p>ಗುರುಬಸವ ಪಟ್ಟದ್ದೇವರು ಮಾತಮಾಡಿ, ‘ನನ್ನ ಗುರು ಬಸವಲಿಂಗ ಪಟ್ಟದ್ದೇವರಿಗೆ ಕಲ್ಯಾಣದಲ್ಲಿ ಅನುಭವ ಮಂಟಪ ಆಗಬೇಕು ಎಂಬ ಬಯಕೆ ಇಟ್ಟುಕೊಂಡಿದ್ದಾರೆ. ಇದಕ್ಕಾಗಿ ಅವರು ಎರಡು ಬಾರಿ ಮುಖ್ಯಮಂತ್ರಿ ಅವರನ್ನೂ ಭೇಟಿ ಮಾಡಿದ್ದಾರೆ’ ಎಂದು ತಿಳಿಸಿದರು.</p>.<p>ಸಂಗಮ ನೀಲಾಂಬಿಕಾ ಆಶ್ರಮದ ಮಹಾದೇವಮ್ಮ ತಾಯಿ, ಸತ್ಯಕ್ಕ ತಾಯಿ, ಪಟ್ಟಣ ಪಂಚಾಯತಿ ಅಧ್ಯಕ್ಷೆ ಅಂಬಿಕಾ ಪವಾರ್, ಧುರೀಣ ಡಾ. ಕಲ್ಲಪ್ಪ ಉಪ್ಪೆ, ಗಿರೀಶ್ ವಡೆಯರ್, ವಸಂತ ವಕೀಲ್, ಶರಣಪ್ಪ ಪಂಚಾಕ್ಷರಿ, ಪ್ರಕಾಶ ಘುಳೆ, ಶರಣಪ್ಪ ಮಿಠಾರೆ, ಸುರೇಶ ಭೋಸ್ಲೆ, ಧೋಂಡಿಬಾ ನರೋಟೆ, ಡಾ. ಮಹೇಶ ಬಿರಾದಾರ, ಬಂಡೆಪ್ಪ ಕಂಟೆ, ಶಿವರಾಜ ಅಲ್ಮಾಜೆ, ಸೂರ್ಯಕಾಂತ ಉಪಸ್ಥಿತರಿದ್ದರು. ಸಂಜುಕುಮಾರ ಜುಮ್ಮಾ ವಂದಿಸಿದರು.</p>.<p>ಪಟ್ಟಣದ ಕನ್ನಡಾಂಬೆ ವೃತದಿಂದ ನಾಗಮಾರಪಳ್ಳಿ ಕಲ್ಯಾಣ ಮಂಟಪದ ವರೆಗೆ ಶ್ರೀಗಳ ಸಾರೋಟಿನ ಮೆರವಣಿಗೆ ನಡೆಯಿತು. ವಿವಿಧ ಕಲಾ ತಂಡಗಳು ಪಾಲ್ಗೊಂಡು ತಮ್ಮ ಕಲೆ ಪ್ರದರ್ಶಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಾದ್:</strong> ‘ಬಸವಕಲ್ಯಾಣದಲ್ಲಿ ನೂತನ ಅನುಭವ ಮಂಟಪ ನಿರ್ಮಿಸುವ ಭಾಲ್ಕಿ ಮಠದ ಬಸವಲಿಂಗ ಪಟ್ಟದ್ದೇವರ ಎರಡು ದಶಕದ ಸಂಕಲ್ಪ ಈಗ ಸಾಕಾರಗೊಳ್ಳುವ ಸಮಯ ಬಂದಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಹೇಳಿದರು.</p>.<p>ಪಟ್ಟಣದಲ್ಲಿ ಶನಿವಾರ ನಡೆದ ಬಸವಲಿಂಗ ಪಟ್ಟದ್ದೇವರ ಅಭಿನಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಬಸವತತ್ವ ಪ್ರಸಾರವೇ ತಮ್ಮ ಬದುಕಿನ ಅವಿಭಾಜ್ಯ ಅಂಗ ಮಾಡಿಕೊಂಡಿರುವ ಬಸವಲಿಂಗ ಪಟ್ಟದ್ದೇವರು ಕಲ್ಯಾಣದಲ್ಲಿ ಅನುಭವ ಮಂಟಪ ಕಟ್ಟಿಸಿ ಹೊಸ ಅಧ್ಯಾಯ ಬರೆಯಲು ಹೊರಟಿದ್ದಾರೆ. ಅವರ ಈ ಮಹತ್ವದ ಬಯಕೆ ಈಡೇರಿಸಲು ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ₹500 ಕೋಟಿ ಮಂಜೂರು ಮಾಡಲಾಗಿದೆ. ₹2 ಕೋಟಿ ಬಿಡುಗಡೆಯಾಗಿದೆ. ಶೀಘ್ರದಲ್ಲೇ ಕಾಮಗಾರಿ ಶುರುವಾಗಲಿದೆ. ನಿಗದಿಯಂತೆ ಎರಡು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟಿಸಲಾಗುವುದು’ ಎಂದರು.</p>.<p>ಸಾನಿಧ್ಯ ವಹಿಸಿದ ಬಸವಲಿಂಗ ಪಟ್ಟದ್ದೇವರು, ‘ನನಗೆ ದೊರೆತ ಪ್ರಶಸ್ತಿ ಪುರಸ್ಕಾರ ಬಸವ ಭಕ್ತರಿಗೆ ಸಲ್ಲಬೇಕು. ಔರಾದ್ ನನ್ನ ಮಾತೃಭೂಮಿ. ಇಲ್ಲಿಯ ಗುರುಲಿಂಗಪ್ಪ ಘುಳೆ ಹಾಗೂ ರಾಚಪ್ಪ ಮುದ್ದಾ ನನ್ನನ್ನು ಓದಲು ಭಾಲ್ಕಿ ಮಠಕ್ಕೆ ಸೇರಿಸಿದವರು. ಮುಂದೆ ಚನ್ನಬಸವ ಪಟ್ಟದ್ದೇವರ ಆಶೀರ್ವಾದದಿಂದ ಬಸವತತ್ವ ಪ್ರಸಾರ ಮಾಡಲು ವೇದಿಕೆ ದೊರೆಯಿತು’ ಎಂದು ಹೇಳಿದರು.</p>.<p>ಗುರುಬಸವ ಪಟ್ಟದ್ದೇವರು ಮಾತಮಾಡಿ, ‘ನನ್ನ ಗುರು ಬಸವಲಿಂಗ ಪಟ್ಟದ್ದೇವರಿಗೆ ಕಲ್ಯಾಣದಲ್ಲಿ ಅನುಭವ ಮಂಟಪ ಆಗಬೇಕು ಎಂಬ ಬಯಕೆ ಇಟ್ಟುಕೊಂಡಿದ್ದಾರೆ. ಇದಕ್ಕಾಗಿ ಅವರು ಎರಡು ಬಾರಿ ಮುಖ್ಯಮಂತ್ರಿ ಅವರನ್ನೂ ಭೇಟಿ ಮಾಡಿದ್ದಾರೆ’ ಎಂದು ತಿಳಿಸಿದರು.</p>.<p>ಸಂಗಮ ನೀಲಾಂಬಿಕಾ ಆಶ್ರಮದ ಮಹಾದೇವಮ್ಮ ತಾಯಿ, ಸತ್ಯಕ್ಕ ತಾಯಿ, ಪಟ್ಟಣ ಪಂಚಾಯತಿ ಅಧ್ಯಕ್ಷೆ ಅಂಬಿಕಾ ಪವಾರ್, ಧುರೀಣ ಡಾ. ಕಲ್ಲಪ್ಪ ಉಪ್ಪೆ, ಗಿರೀಶ್ ವಡೆಯರ್, ವಸಂತ ವಕೀಲ್, ಶರಣಪ್ಪ ಪಂಚಾಕ್ಷರಿ, ಪ್ರಕಾಶ ಘುಳೆ, ಶರಣಪ್ಪ ಮಿಠಾರೆ, ಸುರೇಶ ಭೋಸ್ಲೆ, ಧೋಂಡಿಬಾ ನರೋಟೆ, ಡಾ. ಮಹೇಶ ಬಿರಾದಾರ, ಬಂಡೆಪ್ಪ ಕಂಟೆ, ಶಿವರಾಜ ಅಲ್ಮಾಜೆ, ಸೂರ್ಯಕಾಂತ ಉಪಸ್ಥಿತರಿದ್ದರು. ಸಂಜುಕುಮಾರ ಜುಮ್ಮಾ ವಂದಿಸಿದರು.</p>.<p>ಪಟ್ಟಣದ ಕನ್ನಡಾಂಬೆ ವೃತದಿಂದ ನಾಗಮಾರಪಳ್ಳಿ ಕಲ್ಯಾಣ ಮಂಟಪದ ವರೆಗೆ ಶ್ರೀಗಳ ಸಾರೋಟಿನ ಮೆರವಣಿಗೆ ನಡೆಯಿತು. ವಿವಿಧ ಕಲಾ ತಂಡಗಳು ಪಾಲ್ಗೊಂಡು ತಮ್ಮ ಕಲೆ ಪ್ರದರ್ಶಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>