<p><strong>ಜನವಾಡ: </strong>ಬೀದರ್ ತಾಲ್ಲೂಕಿನ ಬಾವಗಿ ಗ್ರಾಮದಲ್ಲಿ ಗುರು ಭದ್ರೇಶ್ವರ ಜಾತ್ರೆ ಪ್ರಯುಕ್ತ ರಥೋತ್ಸವ ಶ್ರದ್ಧಾ, ಭಕ್ತಿಯಿಂದ ನಡೆಯಿತು.</p>.<p>ಬಣ್ಣ ಬಣ್ಣದ ಧ್ವಜಗಳಿಂದ ಅಲಂಕರಿಸಲಾಗಿದ್ದ ರಥಕ್ಕೆ ಪಂಡಿತಾರಾಧ್ಯ ಶಿವಾಚಾರ್ಯ, ಮಠದ ಶಿವಕುಮಾರ ಸ್ವಾಮಿ, ಶಾಂತಕುಮಾರ ಸ್ವಾಮಿ ತೆಂಗಿನಕಾಯಿ ಒಡೆದು ಚಾಲನೆ ನೀಡಿದರು.</p>.<p>ಭಕ್ತರು ಹರ ಹರ ಮಹಾದೇವ, ಭದ್ರೇಶ್ವರ ಮಹಾರಾಜ್ ಕೀ ಜೈ ಎಂಬ ಘೋಷಣೆಗಳನ್ನು ಹಾಕುತ್ತ ತೇರು ಎಳೆದರು.</p>.<p>ಜಾಂಜ್ ಮೇಳ, ಡೊಳ್ಳು ಕುಣಿತ, ಹೆಜ್ಜೆ ಮೇಳ, ವಾದ್ಯ ಮೇಳ ಮೊದಲಾದ ಜಾನಪದ ಕಲಾ ತಂಡಗಳು ರಥೋತ್ಸವದ ಮೆರುಗು ಹೆಚ್ಚಿಸಿದವು.</p>.<p>ಬೀದರ್ ಸೇರಿ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ನೆರೆ ರಾಜ್ಯಗಳ ಅಪಾರ ಭಕ್ತರು ರಥಕ್ಕೆ ಬಾಳೆ, ಬೆಂಡು, ಬತಾಸು ಎಸೆದು ಭಕ್ತಿ ಸಮರ್ಪಿಸಿದರು.</p>.<p>ಮಾಜಿ ಶಾಸಕ ಅಶೋಕ ಖೇಣಿ, ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ ಭದ್ರೇಶ್ವರ ದರ್ಶನ ಪಡೆದರು.</p>.<p>ಪ್ರಮುಖರಾದ ಭದ್ರಯ್ಯ ಸ್ವಾಮಿ, ಲೋಕೇಶ ಕನಶೆಟ್ಟಿ, ಚನ್ನಮಲ್ಲಪ್ಪ ಹಜ್ಜರಗಿ, ರೇವಣಪ್ಪ ಭದ್ರಣ್ಣ, ರಾಜಕುಮಾರ ಪಾಟೀಲ, ಸಂಗಮೇಶ ಹಜ್ಜರಗಿ, ಶಾಂತವೀರ ಹಜ್ಜರಗಿ, ಸಂತೋಷ ಜಗದಾಳೆ ಹಾಗೂ ಸಿದ್ಧಾರೂಢ ಭಾಲ್ಕೆ, ಗುಂಡಯ್ಯ ಸ್ವಾಮಿ, ಮಡೆಪ್ಪ ಹಜ್ಜರಗಿ ಹಾಗೂ ಬಸವರಾಜ ಖಾದಿ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಜನವಾಡ: </strong>ಬೀದರ್ ತಾಲ್ಲೂಕಿನ ಬಾವಗಿ ಗ್ರಾಮದಲ್ಲಿ ಗುರು ಭದ್ರೇಶ್ವರ ಜಾತ್ರೆ ಪ್ರಯುಕ್ತ ರಥೋತ್ಸವ ಶ್ರದ್ಧಾ, ಭಕ್ತಿಯಿಂದ ನಡೆಯಿತು.</p>.<p>ಬಣ್ಣ ಬಣ್ಣದ ಧ್ವಜಗಳಿಂದ ಅಲಂಕರಿಸಲಾಗಿದ್ದ ರಥಕ್ಕೆ ಪಂಡಿತಾರಾಧ್ಯ ಶಿವಾಚಾರ್ಯ, ಮಠದ ಶಿವಕುಮಾರ ಸ್ವಾಮಿ, ಶಾಂತಕುಮಾರ ಸ್ವಾಮಿ ತೆಂಗಿನಕಾಯಿ ಒಡೆದು ಚಾಲನೆ ನೀಡಿದರು.</p>.<p>ಭಕ್ತರು ಹರ ಹರ ಮಹಾದೇವ, ಭದ್ರೇಶ್ವರ ಮಹಾರಾಜ್ ಕೀ ಜೈ ಎಂಬ ಘೋಷಣೆಗಳನ್ನು ಹಾಕುತ್ತ ತೇರು ಎಳೆದರು.</p>.<p>ಜಾಂಜ್ ಮೇಳ, ಡೊಳ್ಳು ಕುಣಿತ, ಹೆಜ್ಜೆ ಮೇಳ, ವಾದ್ಯ ಮೇಳ ಮೊದಲಾದ ಜಾನಪದ ಕಲಾ ತಂಡಗಳು ರಥೋತ್ಸವದ ಮೆರುಗು ಹೆಚ್ಚಿಸಿದವು.</p>.<p>ಬೀದರ್ ಸೇರಿ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ನೆರೆ ರಾಜ್ಯಗಳ ಅಪಾರ ಭಕ್ತರು ರಥಕ್ಕೆ ಬಾಳೆ, ಬೆಂಡು, ಬತಾಸು ಎಸೆದು ಭಕ್ತಿ ಸಮರ್ಪಿಸಿದರು.</p>.<p>ಮಾಜಿ ಶಾಸಕ ಅಶೋಕ ಖೇಣಿ, ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ ಭದ್ರೇಶ್ವರ ದರ್ಶನ ಪಡೆದರು.</p>.<p>ಪ್ರಮುಖರಾದ ಭದ್ರಯ್ಯ ಸ್ವಾಮಿ, ಲೋಕೇಶ ಕನಶೆಟ್ಟಿ, ಚನ್ನಮಲ್ಲಪ್ಪ ಹಜ್ಜರಗಿ, ರೇವಣಪ್ಪ ಭದ್ರಣ್ಣ, ರಾಜಕುಮಾರ ಪಾಟೀಲ, ಸಂಗಮೇಶ ಹಜ್ಜರಗಿ, ಶಾಂತವೀರ ಹಜ್ಜರಗಿ, ಸಂತೋಷ ಜಗದಾಳೆ ಹಾಗೂ ಸಿದ್ಧಾರೂಢ ಭಾಲ್ಕೆ, ಗುಂಡಯ್ಯ ಸ್ವಾಮಿ, ಮಡೆಪ್ಪ ಹಜ್ಜರಗಿ ಹಾಗೂ ಬಸವರಾಜ ಖಾದಿ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>