<p><strong>ಬಸವಕಲ್ಯಾಣ:</strong> ತಾಲ್ಲೂಕಿನ ಯಲ್ಲದಗುಂಡಿ ಗ್ರಾಮದಲ್ಲಿ ಡಿಎಪಿ ಹೆಸರಲ್ಲಿ ನಕಲಿ ರಸಗೊಬ್ಬರ ಮಾರಾಟ ಮಾಡುತ್ತಿದ್ದ ಗೋದಾಮಿಗೆ ಕೃಷಿ ಇಲಾಖೆ ಅಧಿಕಾರಿಗಳು ಬುಧವಾರ ದಿಢೀರ್ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p>ಜಿಪ್ಸ್ ನ್ನು ಡಿಎಪಿ ಹೆಸರಲ್ಲಿ ಮಾರಾಟ ಮಾಡುತ್ತಿದ್ದ ಕಾರಣ ರೈತರು ಮೋಸ ಹೋಗುತ್ತಿದ್ದರು. ಈ ಬಗ್ಗೆ ಗೊತ್ತಾಗಿದ್ದರಿಂದ ಕೃಷಿ ಇಲಾಖೆ<br />ಜಾರಿ ದಳದ ಮುಖ್ಯಸ್ಥ ಎಂ.ಕೆ. ಅನ್ಸಾರಿ, ವಿಷಯ ತಜ್ಞ ಮಾರ್ತಾಂಡ, ಕೃಷಿ ಸಹಾಯಕ ನಿರ್ದೇಶಕ ವೀರಶೆಟ್ಟಿ ರಾಠೋಡ ದಿಢೀರ್ ದಾಳಿ ನಡೆಸಿ ಗೋದಾಮಿಗೆ ಬೀಗ ಹಾಕಿದ್ದಾರೆ.</p>.<p>’ಗೋದಾಮಿನಲ್ಲಿ 420 ಚೀಲ ರಸಗೊಬ್ಬರ ಇತ್ತು. ಮಾರಾಟಗಾರ ಉಮೇಶ ಎಂಬುವವರ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ’<br />ಎಂದು ವೀರಶೆಟ್ಟಿ ರಾಠೋಡ ತಿಳಿಸಿದ್ದಾರೆ.</p>.<p>ಈ ಸಂದರ್ಭದಲ್ಲಿ ಶಾಸಕ ಶರಣು ಸಲಗರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ.</p>.<p>ಮಂಠಾಳ ಕೃಷಿ ಅಧಿಕಾರಿ ಶ್ರೀಶೈಲ್, ಕೃಷ್ಣಾ ಪಾಟೀಲ, ಬಿಜೆಪಿ ರೈತ ಮೋರ್ಚಾ ತಾಲ್ಲೂಕು ಘಟಕದ ಅಧ್ಯಕ್ಷ ಶಿವರಾಜ ತಾಟೆ, ಅಶೋಕ ವಕಾರೆ, ಸಿದ್ರಾಮ ಕಾಮಣ್ಣ, ಸದಾನಂದ ಪಾಟೀಲ, ಭೀಮಾ ತಾಟೆ, ಗಣೇಶ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ:</strong> ತಾಲ್ಲೂಕಿನ ಯಲ್ಲದಗುಂಡಿ ಗ್ರಾಮದಲ್ಲಿ ಡಿಎಪಿ ಹೆಸರಲ್ಲಿ ನಕಲಿ ರಸಗೊಬ್ಬರ ಮಾರಾಟ ಮಾಡುತ್ತಿದ್ದ ಗೋದಾಮಿಗೆ ಕೃಷಿ ಇಲಾಖೆ ಅಧಿಕಾರಿಗಳು ಬುಧವಾರ ದಿಢೀರ್ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p>ಜಿಪ್ಸ್ ನ್ನು ಡಿಎಪಿ ಹೆಸರಲ್ಲಿ ಮಾರಾಟ ಮಾಡುತ್ತಿದ್ದ ಕಾರಣ ರೈತರು ಮೋಸ ಹೋಗುತ್ತಿದ್ದರು. ಈ ಬಗ್ಗೆ ಗೊತ್ತಾಗಿದ್ದರಿಂದ ಕೃಷಿ ಇಲಾಖೆ<br />ಜಾರಿ ದಳದ ಮುಖ್ಯಸ್ಥ ಎಂ.ಕೆ. ಅನ್ಸಾರಿ, ವಿಷಯ ತಜ್ಞ ಮಾರ್ತಾಂಡ, ಕೃಷಿ ಸಹಾಯಕ ನಿರ್ದೇಶಕ ವೀರಶೆಟ್ಟಿ ರಾಠೋಡ ದಿಢೀರ್ ದಾಳಿ ನಡೆಸಿ ಗೋದಾಮಿಗೆ ಬೀಗ ಹಾಕಿದ್ದಾರೆ.</p>.<p>’ಗೋದಾಮಿನಲ್ಲಿ 420 ಚೀಲ ರಸಗೊಬ್ಬರ ಇತ್ತು. ಮಾರಾಟಗಾರ ಉಮೇಶ ಎಂಬುವವರ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ’<br />ಎಂದು ವೀರಶೆಟ್ಟಿ ರಾಠೋಡ ತಿಳಿಸಿದ್ದಾರೆ.</p>.<p>ಈ ಸಂದರ್ಭದಲ್ಲಿ ಶಾಸಕ ಶರಣು ಸಲಗರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ.</p>.<p>ಮಂಠಾಳ ಕೃಷಿ ಅಧಿಕಾರಿ ಶ್ರೀಶೈಲ್, ಕೃಷ್ಣಾ ಪಾಟೀಲ, ಬಿಜೆಪಿ ರೈತ ಮೋರ್ಚಾ ತಾಲ್ಲೂಕು ಘಟಕದ ಅಧ್ಯಕ್ಷ ಶಿವರಾಜ ತಾಟೆ, ಅಶೋಕ ವಕಾರೆ, ಸಿದ್ರಾಮ ಕಾಮಣ್ಣ, ಸದಾನಂದ ಪಾಟೀಲ, ಭೀಮಾ ತಾಟೆ, ಗಣೇಶ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>