ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸವಕಲ್ಯಾಣ: ನಕಲಿ ವೈದ್ಯನ ಆಸ್ಪತ್ರೆಗೆ ಬೀಗಮುದ್ರೆ

Published 15 ಡಿಸೆಂಬರ್ 2023, 16:07 IST
Last Updated 15 ಡಿಸೆಂಬರ್ 2023, 16:07 IST
ಅಕ್ಷರ ಗಾತ್ರ

ಬೀದರ್‌: ಬಸವಕಲ್ಯಾಣ ತಾಲ್ಲೂಕಿನ ಲಾಡವಂತಿಯಲ್ಲಿ ಕೋಲ್ಕತ್ತದ ನಕಲಿ ವೈದ್ಯ ಹರಿಕೃಷ್ಣ ಎಂಬಾತ ನಡೆಸುತ್ತಿದ್ದ ಆಸ್ಪತ್ರೆ ಮೇಲೆ ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳು ಗುರುವಾರ ದಾಳಿ ನಡೆಸಿ, ಆಸ್ಪತ್ರೆಗೆ ಬೀಗಮುದ್ರೆ ಹಾಕಿದ್ದಾರೆ.

ಸಾರ್ವಜನಿಕರಿಂದ ಬಂದ ದೂರುಗಳನ್ನು ಆಧರಿಸಿ ಬಸವಕಲ್ಯಾಣ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಅಶೋಕ ಮೈಲಾರೆ ಮತ್ತು ಜಿಲ್ಲಾ ಕೆ.ಪಿ.ಎಂ.ಇ ನೋಡಲ್ ಅಧಿಕಾರಿಗಳು ಹಾಗೂ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ದಿಲೀಪ ಡೋಂಗ್ರೆ, ತಂಡದ ಸದಸ್ಯರು ದಾಳಿ ನಡೆಸಿ ಆಸ್ಪತ್ರೆ ಸೀಜ್‌ ಮಾಡಿಸಿದ್ದಾರೆ.

ಪೋಲಿಸ್ ಹೆಡ್ ಕಾನ್‌ಸ್ಟೆಬಲ್‌ಗಳಾದ ವೆಂಕಟ, ಶಿವರಾಜ, ಮಹೇಶ್ವರ ರೆಡ್ಡಿ, ಬಸವಕಲ್ಯಾಣ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯ ಸಿಬ್ಬಂದಿ ರಾಜಕುಮಾರ, ಪ್ರಶಾಂತ, ಸದಾನಂದ, ಲಾಡಂವತಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಅಭಿಷೇಕ ಕನಕ ಅವರು ದಾಳಿ ವೇಳೆ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT