ದೇವಸ್ಥಾನ ಅಭಿವೃದ್ಧಿ ಮರೀಚಿಕೆ
ಶಿಥಿಲಗೊಂಡ ಮಹಾದ್ವಾರ ನಿರ್ಮಾಣ ಸೇರಿದಂತೆ ಅಮರೇಶ್ವರ ದೇವಸ್ಥಾನ ಅಭಿವೃದ್ಧಿ ಆಗಬೇಕು ಎಂಬುದು ಭಕ್ತರ ಬಯಕೆ. ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನ ಅಭಿವೃದ್ಧಿ ಕಾಮಗಾರಿಗಾಗಿ ₹ 2 ಕೋಟಿ ಯೋಜನಾ ವರದಿ ಕಳುಹಿಸಲಾಗಿದೆ. ಆದರೆ ಸರ್ಕಾರದಿಂದ ಅನುಮತಿ ಸಿಗದೆ ಕಾಮಗಾರಿ ಆರಂಭವಾಗಿಲ್ಲ. ಅಮರೇಶ್ವರ ದೇವಸ್ಥಾನ ಅಭಿವೃದ್ಧಿಗಾಗಿ ಸಾಮಾಜಿಕ ಹೋರಾಟಗಾರ ಗುರುನಾಥ ವಡ್ಡೆ ಅವರು ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನೂ ಸಲ್ಲಿಸಿದ್ದಾರೆ.