<p><strong>ಬೀದರ್: </strong>ವಯೋನಿವೃತ್ತಿ ಹೊಂದಿದ ಇಲ್ಲಿಯ ಜೀಜಾಮಾತಾ ಪ್ರೌಢಶಾಲೆಯ ಶಿಕ್ಷಕ ಅಂಬಾದಾಸ ಜಾನಾಪೂರೆ ಅವರನ್ನು ಶಾಲೆಯಲ್ಲಿ ಸನ್ಮಾನಿಸಿ ಬೀಳ್ಕೊಡಲಾಯಿತು.</p>.<p>ಶಿವ ಛತ್ರಪತಿ ಸ್ಮಾರಕ ಸಮಿತಿ ಅಧ್ಯಕ್ಷ ಸತೀಶ ಮುಳೆ ಮಾತನಾಡಿ, ಅಂಬಾದಾಸ ಜಾನಾಪೂರೆ ಅವರ ಸೇವಾ ನಿಷ್ಠೆ, ಪ್ರಾಮಾಣಿಕತೆ ಹಾಗೂ ಸಮಯ ಪ್ರಜ್ಞೆ ಎಲ್ಲರಿಗೆ ಮಾದರಿಯಾಗಿದೆ ಎಂದು ತಿಳಿಸಿದರು.</p>.<p>ಸಮಾಜದಲ್ಲಿ ಶಿಕ್ಷಕರಿಗೆ ಬಹಳ ಗೌರವ ಇದೆ. ಶಿಕ್ಷಕರು ತಮ್ಮ ವೃತ್ತಿಯನ್ನು ಪ್ರೀತಿಸಬೇಕು ಮಕ್ಕಳ ಭವಿಷ್ಯ ಉಜ್ವಲಗೊಳಿಸಲು ಶ್ರಮಿಸಬೇಕು ಎಂದು ಸಲಹೆ ಮಾಡಿದರು.</p>.<p>ಈಚೆಗೆ ನಿಧನರಾದ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಮಲ್ಲಪ್ಪ ಹೂಗಾಡೆ ಅವರು ಸರಳ, ಸಜ್ಜನ ವ್ಯಕ್ತಿಯಾಗಿದ್ದರು. ಸಂಸ್ಥೆಗೆ ಅವರು ನೀಡಿದ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.</p>.<p>ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕಿ ಗೀತಾ ಗಡ್ಡಿ ಸಸಿಗೆ ನೀರೆರೆದು ಕಾರ್ಯಕ್ರಮ ಉದ್ಘಾಟಿಸಿದರು. ಮಲ್ಲಪ್ಪ ಹೂಗಾಡೆ ಅವರ ಆತ್ಮಕ್ಕೆ ಶಾಂತಿ ಕೋರಿ ಎರಡು ನಿಮಿಷಗಳ ಮೌನ ಆಚರಿಸಲಾಯಿತು.</p>.<p>ಶಿಕ್ಷಕರಾದ ಮಲ್ಲಿಕಾರ್ಜುನ, ಪ್ರತಾಪ ಸೂರ್ಯವಂಶಿ, ಪ್ರಕಾಶ ದಾಡಗೆ, ಬಾಲಾಜಿ ಬಿರಾದಾರ, ಶ್ರೀಕಾಂತ ಹೂಗಾಡೆ, ವಾಸುದೇವ, ಚಂದ್ರಕಾಂತ, ಸುಧೀರ ರಾಗಾ, ಪ್ರಭಣ್ಣ, ಅರ್ಜುನ, ಬಸವರಾಜ, ಭೀಮಶಾ, ರಾಮ, ರಾಜಕುಮಾರ, ವಿವೇಕ, ಕುಮಾರ, ಅನೀಲಕುಮಾರ, ಆನಂದ ಉಪಸ್ಥಿತರಿದ್ದರು.</p>.<p>ಶಿಕ್ಷಕ ತಾನಾಜಿ ಕಾರಬಾರಿ ಸ್ವಾಗತಿಸಿದರು. ಜೀಜಾಮಾತಾ ಕನ್ಯಾ ಪ್ರೌಢಶಾಲೆಯ ಮುಖ್ಯಶಿಕ್ಷಕ ಪರಮೇಶ್ವರ ಬಿರಾದಾರ ಸ್ವಾಗತಿಸಿದರು. ಮೋಹನ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ವಯೋನಿವೃತ್ತಿ ಹೊಂದಿದ ಇಲ್ಲಿಯ ಜೀಜಾಮಾತಾ ಪ್ರೌಢಶಾಲೆಯ ಶಿಕ್ಷಕ ಅಂಬಾದಾಸ ಜಾನಾಪೂರೆ ಅವರನ್ನು ಶಾಲೆಯಲ್ಲಿ ಸನ್ಮಾನಿಸಿ ಬೀಳ್ಕೊಡಲಾಯಿತು.</p>.<p>ಶಿವ ಛತ್ರಪತಿ ಸ್ಮಾರಕ ಸಮಿತಿ ಅಧ್ಯಕ್ಷ ಸತೀಶ ಮುಳೆ ಮಾತನಾಡಿ, ಅಂಬಾದಾಸ ಜಾನಾಪೂರೆ ಅವರ ಸೇವಾ ನಿಷ್ಠೆ, ಪ್ರಾಮಾಣಿಕತೆ ಹಾಗೂ ಸಮಯ ಪ್ರಜ್ಞೆ ಎಲ್ಲರಿಗೆ ಮಾದರಿಯಾಗಿದೆ ಎಂದು ತಿಳಿಸಿದರು.</p>.<p>ಸಮಾಜದಲ್ಲಿ ಶಿಕ್ಷಕರಿಗೆ ಬಹಳ ಗೌರವ ಇದೆ. ಶಿಕ್ಷಕರು ತಮ್ಮ ವೃತ್ತಿಯನ್ನು ಪ್ರೀತಿಸಬೇಕು ಮಕ್ಕಳ ಭವಿಷ್ಯ ಉಜ್ವಲಗೊಳಿಸಲು ಶ್ರಮಿಸಬೇಕು ಎಂದು ಸಲಹೆ ಮಾಡಿದರು.</p>.<p>ಈಚೆಗೆ ನಿಧನರಾದ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಮಲ್ಲಪ್ಪ ಹೂಗಾಡೆ ಅವರು ಸರಳ, ಸಜ್ಜನ ವ್ಯಕ್ತಿಯಾಗಿದ್ದರು. ಸಂಸ್ಥೆಗೆ ಅವರು ನೀಡಿದ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.</p>.<p>ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕಿ ಗೀತಾ ಗಡ್ಡಿ ಸಸಿಗೆ ನೀರೆರೆದು ಕಾರ್ಯಕ್ರಮ ಉದ್ಘಾಟಿಸಿದರು. ಮಲ್ಲಪ್ಪ ಹೂಗಾಡೆ ಅವರ ಆತ್ಮಕ್ಕೆ ಶಾಂತಿ ಕೋರಿ ಎರಡು ನಿಮಿಷಗಳ ಮೌನ ಆಚರಿಸಲಾಯಿತು.</p>.<p>ಶಿಕ್ಷಕರಾದ ಮಲ್ಲಿಕಾರ್ಜುನ, ಪ್ರತಾಪ ಸೂರ್ಯವಂಶಿ, ಪ್ರಕಾಶ ದಾಡಗೆ, ಬಾಲಾಜಿ ಬಿರಾದಾರ, ಶ್ರೀಕಾಂತ ಹೂಗಾಡೆ, ವಾಸುದೇವ, ಚಂದ್ರಕಾಂತ, ಸುಧೀರ ರಾಗಾ, ಪ್ರಭಣ್ಣ, ಅರ್ಜುನ, ಬಸವರಾಜ, ಭೀಮಶಾ, ರಾಮ, ರಾಜಕುಮಾರ, ವಿವೇಕ, ಕುಮಾರ, ಅನೀಲಕುಮಾರ, ಆನಂದ ಉಪಸ್ಥಿತರಿದ್ದರು.</p>.<p>ಶಿಕ್ಷಕ ತಾನಾಜಿ ಕಾರಬಾರಿ ಸ್ವಾಗತಿಸಿದರು. ಜೀಜಾಮಾತಾ ಕನ್ಯಾ ಪ್ರೌಢಶಾಲೆಯ ಮುಖ್ಯಶಿಕ್ಷಕ ಪರಮೇಶ್ವರ ಬಿರಾದಾರ ಸ್ವಾಗತಿಸಿದರು. ಮೋಹನ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>