<p><strong>ಭಾಲ್ಕಿ</strong>: ತಾಲ್ಲೂಕಿನ ಬಸವನವಾಡಿ ಗ್ರಾಮದ ರೈತ ಲಕ್ಷ್ಮಣರಾವ ಗೋರಕರಾವ ಅವರು ಬೆಳೆದ ಕಲ್ಲಂಗಡಿ ಹೊಲದಲ್ಲಿಯೇ ಕೊಳೆಯುತ್ತಿದೆ.</p>.<p>ಎರಡೂವರೆ ಎಕರೆಯಲ್ಲಿ ಅವರು ಕಲ್ಲಂಗಡಿ ಬೆಳೆದಿದ್ದರು. ಆದರೆ, ಸಾರಿಗೆ ವ್ಯವಸ್ಥೆ ಇಲ್ಲದ ಕಾರಣ ಮಾರುಕಟ್ಟೆ ಸಿಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ.</p>.<p>‘ಕಲ್ಲಂಗಡಿ ಬೆಳೆಯಲ್ಲಿ ಉತ್ತಮ ಲಾಭ ಪಡೆಯಬಹುದು ಎಂದು ಸಾಲ ಮಾಡಿ ಎರಡೂವರೆ ಎಕರೆಯಲ್ಲಿ ಕಲ್ಲಂಗಡಿ ಬೆಳೆದಿದ್ದೇನೆ. ₹2.5 ಲಕ್ಷ ಖರ್ಚು ಮಾಡಿದ್ದೇನೆ. ಕಲ್ಲಂಗಡಿ ಮಾರಾಟದಿಂದ ಕೈ ತುಂಬಾ ಸಂಪಾದನೆ ಮಾಡಿ ಸಾಲ ತೀರಿಸಿ ಉತ್ತಮ ಬದುಕು ನಡೆಸಬೇಕು ಎನ್ನುವಷ್ಟರಲ್ಲಿ ಕೊರೊನಾ ಬಂದು ನಮ್ಮ ಬದುಕನ್ನು ಬೀದಿಗೆ ತಳ್ಳಿತು’ ಎಂದು ರೈತ ಲಕ್ಷ್ಮಣರಾವ ಗೋರಕರಾವ<br />ಕಣ್ಣಿರಾದರು.</p>.<p>‘ಹನಿ ನೀರಾವರಿಗಾಗಿ ಖಾಸಗಿಯವರ ಬಳಿ ಸಾಲ ಮಾಡಿದ್ದರಿಂದ ಬೆಳೆ ನಷ್ಟ ನನ್ನನ್ನು ಆರ್ಥಿಕ ಸಂಕಷ್ಟಕ್ಕೆ ತಳ್ಳಿದೆ. ಸರ್ಕಾರ ನೆರವಿಗೆ ಬರಬೇಕು’ ಎಂದು ಅವರು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾಲ್ಕಿ</strong>: ತಾಲ್ಲೂಕಿನ ಬಸವನವಾಡಿ ಗ್ರಾಮದ ರೈತ ಲಕ್ಷ್ಮಣರಾವ ಗೋರಕರಾವ ಅವರು ಬೆಳೆದ ಕಲ್ಲಂಗಡಿ ಹೊಲದಲ್ಲಿಯೇ ಕೊಳೆಯುತ್ತಿದೆ.</p>.<p>ಎರಡೂವರೆ ಎಕರೆಯಲ್ಲಿ ಅವರು ಕಲ್ಲಂಗಡಿ ಬೆಳೆದಿದ್ದರು. ಆದರೆ, ಸಾರಿಗೆ ವ್ಯವಸ್ಥೆ ಇಲ್ಲದ ಕಾರಣ ಮಾರುಕಟ್ಟೆ ಸಿಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ.</p>.<p>‘ಕಲ್ಲಂಗಡಿ ಬೆಳೆಯಲ್ಲಿ ಉತ್ತಮ ಲಾಭ ಪಡೆಯಬಹುದು ಎಂದು ಸಾಲ ಮಾಡಿ ಎರಡೂವರೆ ಎಕರೆಯಲ್ಲಿ ಕಲ್ಲಂಗಡಿ ಬೆಳೆದಿದ್ದೇನೆ. ₹2.5 ಲಕ್ಷ ಖರ್ಚು ಮಾಡಿದ್ದೇನೆ. ಕಲ್ಲಂಗಡಿ ಮಾರಾಟದಿಂದ ಕೈ ತುಂಬಾ ಸಂಪಾದನೆ ಮಾಡಿ ಸಾಲ ತೀರಿಸಿ ಉತ್ತಮ ಬದುಕು ನಡೆಸಬೇಕು ಎನ್ನುವಷ್ಟರಲ್ಲಿ ಕೊರೊನಾ ಬಂದು ನಮ್ಮ ಬದುಕನ್ನು ಬೀದಿಗೆ ತಳ್ಳಿತು’ ಎಂದು ರೈತ ಲಕ್ಷ್ಮಣರಾವ ಗೋರಕರಾವ<br />ಕಣ್ಣಿರಾದರು.</p>.<p>‘ಹನಿ ನೀರಾವರಿಗಾಗಿ ಖಾಸಗಿಯವರ ಬಳಿ ಸಾಲ ಮಾಡಿದ್ದರಿಂದ ಬೆಳೆ ನಷ್ಟ ನನ್ನನ್ನು ಆರ್ಥಿಕ ಸಂಕಷ್ಟಕ್ಕೆ ತಳ್ಳಿದೆ. ಸರ್ಕಾರ ನೆರವಿಗೆ ಬರಬೇಕು’ ಎಂದು ಅವರು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>