ಚಿಟಗುಪ್ಪ: ತಾಲ್ಲೂಕಿನ ಉಡಬಾಳ ಗ್ರಾಮದಲ್ಲಿ ಗುರುವಾರ ಸಾಲಬಾಧೆ ತಾಳದೆ ರೈತ ಮಾರುತಿ ಕಲಶೆಟ್ಟಿ (45) ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿ ಇದ್ದಾರೆ.
ತುಂಡು ಭೂಮಿ ಹೊಂದಿದ್ದ ಇವರು ಗ್ರಾಮದ ಹಲವು ರೈತರ ಹೊಲಗಳನ್ನು ಪಾಲದ ಕರಾರಿನಲ್ಲಿ ಸಾಗುವಳಿ ಮಾಡಿಕೊಂಡಿದ್ದರು. ಕೃಷಿ ಚಟುವಟಿಕೆಗೆ ಖಾಸಗಿ ಮೂಲಗಳಿಂದ ಸಾಲ ಪಡೆದಿದ್ದರು. ಸಾಲ ಮರು ಪಾವತಿಸಲಾಗದೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಠಾಣೆಯಲ್ಲಿ ದಾಖಲಾದ ದೂರಿನಲ್ಲಿ ತಿಳಿಸಲಾಗಿದೆ.