<p><strong>ಅಫಜಲಪುರ:</strong> ತಾಲ್ಲೂಕಿನ ದಿಕ್ಸಂಗಾ (ಕೆ) ಗ್ರಾಮದ ರೈತ ಬೀರಣ್ಣ ಪಾಟೀಲ (50) ಸಾಲಬಾಧೆಗೆ ಬೇಸತ್ತು ಭಾನುವಾರ ಮನೆಯಲ್ಲಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಮೃತ ರೈತನಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರು ಇದ್ದಾರೆ. ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಬೀರಣ್ಣ ಗ್ರಾಮದಲ್ಲಿ 4.8 ಎಕರೆ ಜಮೀನು ಹೊಂದಿದ್ದು, ಮಾಶ್ಯಾಳ ಗ್ರಾಮದ ಬ್ಯಾಂಕ್ನಲ್ಲಿ ₹ 4.71 ಲಕ್ಷ ಹಾಗೂ ಖಾಸಗಿಯಾಗಿ ₹ 6 ಲಕ್ಷ ಸಾಲ ಮಾಡಿದ್ದರು. ಸಾಲಕ್ಕೆ ಹೆದರಿ ಮನೆಯಲ್ಲಿ ವಿಷ ಸೇವಿಸಿದ್ದಾರೆ. ಕೂಡಲೇ ಸ್ಥಳೀಯರ ಸಹಾಯದಿಂದ ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.</p>.<p>‘ಸಾಲಬಾಧೆಯಿಂದ ರೈತರ ಆತ್ಮಹತ್ಯೆ ಹೆಚ್ಚಳವಾಗುತ್ತಿದ್ದು, ಸರ್ಕಾರ ರೈತರ ಸಾಲ ಮನ್ನಾ ಮಾಡಬೇಕು’ ಎಂದು ತಾಲ್ಲೂಕು ಪ್ರಾಂತ ರೈತ ಸಂಘದ ಅಧ್ಯಕ್ಷ ಶ್ರೀಮಂತ ಬಿರಾದಾರ, ಕಾರ್ಯದರ್ಶಿ ಗುರು ಚಾಂದಕೋಟೆ ಒತ್ತಾಯಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಫಜಲಪುರ:</strong> ತಾಲ್ಲೂಕಿನ ದಿಕ್ಸಂಗಾ (ಕೆ) ಗ್ರಾಮದ ರೈತ ಬೀರಣ್ಣ ಪಾಟೀಲ (50) ಸಾಲಬಾಧೆಗೆ ಬೇಸತ್ತು ಭಾನುವಾರ ಮನೆಯಲ್ಲಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಮೃತ ರೈತನಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರು ಇದ್ದಾರೆ. ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಬೀರಣ್ಣ ಗ್ರಾಮದಲ್ಲಿ 4.8 ಎಕರೆ ಜಮೀನು ಹೊಂದಿದ್ದು, ಮಾಶ್ಯಾಳ ಗ್ರಾಮದ ಬ್ಯಾಂಕ್ನಲ್ಲಿ ₹ 4.71 ಲಕ್ಷ ಹಾಗೂ ಖಾಸಗಿಯಾಗಿ ₹ 6 ಲಕ್ಷ ಸಾಲ ಮಾಡಿದ್ದರು. ಸಾಲಕ್ಕೆ ಹೆದರಿ ಮನೆಯಲ್ಲಿ ವಿಷ ಸೇವಿಸಿದ್ದಾರೆ. ಕೂಡಲೇ ಸ್ಥಳೀಯರ ಸಹಾಯದಿಂದ ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.</p>.<p>‘ಸಾಲಬಾಧೆಯಿಂದ ರೈತರ ಆತ್ಮಹತ್ಯೆ ಹೆಚ್ಚಳವಾಗುತ್ತಿದ್ದು, ಸರ್ಕಾರ ರೈತರ ಸಾಲ ಮನ್ನಾ ಮಾಡಬೇಕು’ ಎಂದು ತಾಲ್ಲೂಕು ಪ್ರಾಂತ ರೈತ ಸಂಘದ ಅಧ್ಯಕ್ಷ ಶ್ರೀಮಂತ ಬಿರಾದಾರ, ಕಾರ್ಯದರ್ಶಿ ಗುರು ಚಾಂದಕೋಟೆ ಒತ್ತಾಯಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>