ಸದ್ಯ ಹೆಸರು, ಸೊಯಾ, ಸೇರಿದಂತೆ ಎಲ್ಲ ಮುಂಗಾರು ಬೆಳೆಗಳು ಸಮೃದ್ಧವಾಗಿ ಬೆಳೆದಿವೆ. ಆದರೆ ಸದ್ಯ ಮಳೆಯ ಅವಶ್ಯಕವಿದೆ. ಒಂದು ವೇಳೆ ಮಳೆ ಬಾರದಿದ್ದರೆ ಬೆಳೆಗಳು ಒಣಗುತ್ತವೆ ಎಂಬ ಆತಂಕ ರೈತರಲ್ಲಿ ಮನೆಮಾಡಿದೆ. ಆದ್ದರಿಂದ ಸದ್ಯ ರೈತರು ಮಳೆ ಬರಲಿ ಎಂದು ದೇವರಿಗೆ ವಿಶೇಷ ಪೂಜೆ, ಭಜನೆ ಮಾಡುತ್ತಿರುವುದು ಕಂಡುಬರುತ್ತಿದೆ.