‘ರೈತನಿಗೆ ಹಣ ಪಾವತಿಗೆ ಕ್ರಮ ಕೈಗೊಳ್ಳಲಾಗುವುದು. ಆದರೆ, ಕಿರಿಯ ಎಂಜಿನಿಯರ್ ಯಾರು ಎಂಬುದನ್ನು ರೈತ ಸ್ಪಷ್ಟವಾಗಿ ಹೇಳುತ್ತಿಲ್ಲ. 2019ರಲ್ಲಿ ಕಾಮಗಾರಿ ಆರಂಭವಾದಾಗ, ಆ ಹುದ್ದೆಯಲ್ಲಿ ಬೇರೆಯವರು ಇದ್ದರು.ಈಗ ಸೂರ್ಯಕಾಂತ ಎಂಬುವರು ಇದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳಿಗೆ ವರದಿ ಸಲ್ಲಿಸಿದ್ದೇನೆ’ ಎಂದು ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಸಂತೋಷ ಚವಾಣ್ ತಿಳಿಸಿದ್ದಾರೆ.