‘ವೈಜ್ಞಾನಿಕ ತಂತ್ರಜ್ಞಾನ ಪದ್ಧತಿ ಹಾಗೂ ಹಿರಿಯರಾದ ರವಿ ಪಾಟೀಲ ಹೊನ್ನಿಕೇರಿ, ಕಂಠಯ್ಯ ಸ್ವಾಮಿ, ಅಭಿಮನ್ಯು ಅವರ
ಮಾರ್ಗದರ್ಶನದಿಂದಲೇ ನಾನು ಹೆಚ್ಚಿನ ಆದಾಯ ಗಳಿಸಲು ಸಹಾಯವಾಯಿತು. ಒಟ್ಟು 4 ಎಕರೆಯಿಂದ ವರ್ಷದಲ್ಲಿ 10 ಲಕ್ಷ ಆದಾಯವನ್ನು ಪಡೆಯುತ್ತಿದ್ದೇನೆ. ಒಂದು ಬೆಳೆಯನ್ನು ನಂಬಿ ಕೃಷಿ ಮಾಡುವುದು ಸೂಕ್ತವಾದ ಬೇಸಾಯ ಪದ್ಧತಿಯಲ್ಲ, ನಾಲ್ಕೈದು ಬೆಳೆ ಮಾಡಿದರೆ ಒಂದಿಲ್ಲ ಒಂದು ಬೆಳೆಗೆ ಉತ್ತಮ ಬೆಲೆ ಸಿಕ್ಕಿ ಆದಾಯ ಸ್ಥಿರವಾಗಿರುತ್ತದೆ, ಜಮೀನನ್ನು ವೈಜ್ಞಾನಿಕವಾಗಿ ವಿಂಗಡಣೆ ಮಾಡಿ ಬಹು ಬೆಳೆ ಮಾಡಿದರೆ ನಷ್ಟದ ಮಾತಿಲ್ಲ’ ಎಂದು ಹೇಳುತ್ತಾರೆ ರೈತ ಶಿವಕುಮಾರ.