ಜನವಾಡ: ಸಾಲಬಾಧೆ ತಾಳದೇ ಬೀದರ್ ತಾಲ್ಲೂಕಿನ ಕಮಠಾಣ ಗ್ರಾಮದ ರೈತ ಸಲೀಂ ಹನ್ನುಮಿಯಾ (30) ತಮ್ಮ ಹೊಲದಲ್ಲಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹೊಲದಲ್ಲಿ ನೀರಿನ ಕೊರತೆಯಿಂದಾಗಿ ಉಂಟಾದ ಬೆಳೆ ಹಾನಿ ಹಾಗೂ ಖಾಸಗಿ ಸಾಲ ಬಾಧೆಯಿಂದ ನೊಂದು ತನ್ನ ಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮೃತರ ಪತ್ನಿ ಮಾಲನ್ ಬೇಗಂ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಮನ್ನಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.