ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಟಗುಪ್ಪ: ರೈತ ಆತ್ಮಹತ್ಯೆ

Last Updated 9 ಆಗಸ್ಟ್ 2021, 4:26 IST
ಅಕ್ಷರ ಗಾತ್ರ

ಚಿಟಗುಪ್ಪ: ತಾಲ್ಲೂಕಿನ ಹಣಕುಣಿ ಗ್ರಾಮದ ಸ್ವಂತ ಮನೆಯಲ್ಲಿ ರೈತರೊಬ್ಬರು ಶನಿವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಮಲಾಕರ್‌ ತುಕ್ಕಪ್ಪ ಸಾಗರ (34) ನೇಣಿಗೆ ಶರಣಾದವರು. ಇಟಗಾ ಗ್ರಾಮದ ಪ್ರಾಥಮಿಕ ಪತ್ತಿನ ಸಹಕಾರ ನಿಯಮಿತದಲ್ಲಿ ₹ 1 ಲಕ್ಷ, ಚಿಟಗುಪ್ಪ ಭಾರತೀಯ ಸ್ಟೇಟ್‌ ಬ್ಯಾಂಕ್‌ ಶಾಖೆಯಲ್ಲಿ ₹2.85 ಲಕ್ಷ ಸಾಲ ಮಾಡಿದ್ದರು ಎಂದು ಕುಟುಂದಬವರು ತಿಳಿಸಿದ್ದಾರೆ. ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರಿಗೆ ಪತ್ನಿ ಮತ್ತು ಇಬ್ಬರು ಮಕ್ಕಳಿದ್ದಾರೆ. ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT