ಬಸವಕಲ್ಯಾಣ: ತಾಲ್ಲೂಕಿನ ಖೇರ್ಡಾ(ಬಿ)ದಲ್ಲಿ ರೈತ ಕಲ್ಲಯ್ಯ ಹಿರೇಮಠ (55) ಸಾಲದ ಹೊರೆ ತಾಳದೆ ಶನಿವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹೊಲದಲ್ಲಿನ ಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 5 ಎಕರೆ ಹೊಲ ಇದ್ದು ಕೃಷಿ ಚಟುವಟಿಕೆಗಾಗಿ ಸಾಲ ಪಡೆದುಕೊಂಡಿದ್ದ ಎನ್ನಲಾಗಿದೆ. ಈ ಬಗ್ಗೆ ಮುಡಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.