<p><strong>ಜನವಾಡ: </strong>ರೈತರ ಆದಾಯ ದ್ವಿಗುಣಗೊಳಿಸುವಲ್ಲಿ ಅಣಬೆ ಪಾತ್ರ ಮಹತ್ವದ್ದಾಗಿದೆ ಎಂದು ರಾಯಚೂರಿನ ಕೃಷಿ ಕಾಲೇಜಿನ ಗೃಹ ವಿಜ್ಞಾನ ಸಹಾಯಕ ಪ್ರಾಧ್ಯಾಪಕಿ ಡಾ.ಅನುಪಮಾ ನುಡಿದರು.</p>.<p>ಬೀದರ್ ತಾಲ್ಲೂಕಿನ ಜನವಾಡ ಸಮೀಪದ ಕೃಷಿ ವಿಜ್ಞಾನ ಕೇಂದ್ರವು ಕೆವಿಕೆ ಕೃಷಿ ಪಾಠಶಾಲೆ ಸರಣಿಯಲ್ಲಿ ರೈತರಿಗೆ ಆನ್ಲೈನ್ನಲ್ಲಿ ಶನಿವಾರ ಅಣಬೆ ಉತ್ಪಾದನೆ ತಾಂತ್ರಿಕತೆಗಳು ಕುರಿತು ನಡೆಸಿದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಅಣಬೆ ಆರೋಗ್ಯಕ್ಕೆ ಬಹಳ ಉತ್ತಮವಾಗಿದೆ. ಕೃಷಿ ಭೂಮಿ ಇಲ್ಲದಿದ್ದರೂ ಅಣಬೆ ಬೇಸಾಯ ಮಾಡಿ ಸಂಪಾದನೆ ಮಾಡಬಹುದು ಎಂದು ತಿಳಿಸಿದರು.</p>.<p>ಅಣಬೆ ಕೃಷಿ ಮಹತ್ವ, ಅಣಬೆ ಉತ್ಪಾದನೆಗೆ ಇರುವ ಅವಕಾಶಗಳು, ಕೃಷಿ ವ್ಯವಹಾರ ಚಟುವಟಿಕೆ, ಪ್ರಾಯೋಗಿಕ ಆಯಸ್ಟರ್, ಹಾಲು ಅಣಬೆ ಬೇಸಾಯ ವಿಧಾನ ಹಾಗೂ ಮೌಲವರ್ಧನೆ ಕುರಿತು ಅವರು ವಿವರವಾದ ಮಾಹಿತಿ ನೀಡಿದರು.</p>.<p>ಯುವಕರು ಅಣಬೆ ಬೇಸಾಯಕ್ಕೆ ಒಲವು ತೋರಬೇಕು. ಕೃಷಿ ವಿಜ್ಞಾನ ಕೇಂದ್ರವು ಗುಣಮಟ್ಟದ ಕೃಷಿ ಉತ್ಪನ್ನಗಳ ಉತ್ಪಾದನೆಗೆ ಪೂರಕವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಸುನೀಲಕುಮಾರ ಎನ್.ಎಂ. ಹೇಳಿದರು.</p>.<p>ಬೀದರ್, ಕಲಬುರ್ಗಿ, ಬೆಳಗಾವಿ, ಕೋಲಾರ, ಮೈಸೂರು, ಹಾಸನ, ಬಳ್ಳಾರಿ, ರಾಯಚೂರು ಮೊದಲಾದ ಜಿಲ್ಲೆಗಳ 78 ರೈತರು ತರಬೇತಿಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜನವಾಡ: </strong>ರೈತರ ಆದಾಯ ದ್ವಿಗುಣಗೊಳಿಸುವಲ್ಲಿ ಅಣಬೆ ಪಾತ್ರ ಮಹತ್ವದ್ದಾಗಿದೆ ಎಂದು ರಾಯಚೂರಿನ ಕೃಷಿ ಕಾಲೇಜಿನ ಗೃಹ ವಿಜ್ಞಾನ ಸಹಾಯಕ ಪ್ರಾಧ್ಯಾಪಕಿ ಡಾ.ಅನುಪಮಾ ನುಡಿದರು.</p>.<p>ಬೀದರ್ ತಾಲ್ಲೂಕಿನ ಜನವಾಡ ಸಮೀಪದ ಕೃಷಿ ವಿಜ್ಞಾನ ಕೇಂದ್ರವು ಕೆವಿಕೆ ಕೃಷಿ ಪಾಠಶಾಲೆ ಸರಣಿಯಲ್ಲಿ ರೈತರಿಗೆ ಆನ್ಲೈನ್ನಲ್ಲಿ ಶನಿವಾರ ಅಣಬೆ ಉತ್ಪಾದನೆ ತಾಂತ್ರಿಕತೆಗಳು ಕುರಿತು ನಡೆಸಿದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಅಣಬೆ ಆರೋಗ್ಯಕ್ಕೆ ಬಹಳ ಉತ್ತಮವಾಗಿದೆ. ಕೃಷಿ ಭೂಮಿ ಇಲ್ಲದಿದ್ದರೂ ಅಣಬೆ ಬೇಸಾಯ ಮಾಡಿ ಸಂಪಾದನೆ ಮಾಡಬಹುದು ಎಂದು ತಿಳಿಸಿದರು.</p>.<p>ಅಣಬೆ ಕೃಷಿ ಮಹತ್ವ, ಅಣಬೆ ಉತ್ಪಾದನೆಗೆ ಇರುವ ಅವಕಾಶಗಳು, ಕೃಷಿ ವ್ಯವಹಾರ ಚಟುವಟಿಕೆ, ಪ್ರಾಯೋಗಿಕ ಆಯಸ್ಟರ್, ಹಾಲು ಅಣಬೆ ಬೇಸಾಯ ವಿಧಾನ ಹಾಗೂ ಮೌಲವರ್ಧನೆ ಕುರಿತು ಅವರು ವಿವರವಾದ ಮಾಹಿತಿ ನೀಡಿದರು.</p>.<p>ಯುವಕರು ಅಣಬೆ ಬೇಸಾಯಕ್ಕೆ ಒಲವು ತೋರಬೇಕು. ಕೃಷಿ ವಿಜ್ಞಾನ ಕೇಂದ್ರವು ಗುಣಮಟ್ಟದ ಕೃಷಿ ಉತ್ಪನ್ನಗಳ ಉತ್ಪಾದನೆಗೆ ಪೂರಕವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಸುನೀಲಕುಮಾರ ಎನ್.ಎಂ. ಹೇಳಿದರು.</p>.<p>ಬೀದರ್, ಕಲಬುರ್ಗಿ, ಬೆಳಗಾವಿ, ಕೋಲಾರ, ಮೈಸೂರು, ಹಾಸನ, ಬಳ್ಳಾರಿ, ರಾಯಚೂರು ಮೊದಲಾದ ಜಿಲ್ಲೆಗಳ 78 ರೈತರು ತರಬೇತಿಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>