ರೈತ ಸಂಘದ ತಾಲ್ಲೂಕು ಘಟಕದ ಉಪಾಧ್ಯಕ್ಷ ಸಂತೋಷಕುಮಾರ ಗುದಗೆ ಮಾತನಾಡಿ, ‘ಬೀಜದ ಅಭಾವ ಆಗಿದ್ದರಿಂದ ಇನ್ನಷ್ಟು ತೊಂದರೆ ಆಗಿದೆ. ಗೊಬ್ಬರ ಕೂಡ ಸಮಯಕ್ಕೆ ಸಿಗುತ್ತಿಲ್ಲ. ಕೆಲ ದಿನಗಳ ಹಿಂದೆಯೇ 600 ಜನರಿಂದ ಹಣ ಪಡೆದು ಹೆಸರು ನೋಂದಾಯಿಸಿಕೊಂಡು ಟೋಕನ್ ನೀಡಲಾಗಿದೆ. ಅವರು ರೈತ ಸಂಪರ್ಕ ಕೇಂದ್ರಕ್ಕೆ ಪ್ರತಿದಿನ ಬಂದು ವಾಪಸ್ ಹೋಗುತ್ತಿದ್ದಾರೆ. ಆದರೂ, ಸಂಬಂಧಿತರು ಅಗತ್ಯ ಕ್ರಮ ತೆಗೆದುಕೊಳ್ಳುತ್ತಿಲ್ಲ’ ಎಂದು ದೂರಿದರು.