<p><strong>ಭಾಲ್ಕಿ</strong>: ತಾಲ್ಲೂಕಿನ ಹುಣಜಿ(ಎ) ಸಮೀಪದ ಮಹಾತ್ಮ ಗಾಂಧಿ ಸಹಕಾರ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ಸೋಮವಾರ ಶಾಂತಿಯುತವಾಗಿ ಮತದಾನ ನಡೆಯಿತು.</p>.<p>ಒಟ್ಟು 4,452 ರೈತ ಮತದಾರರಿದ್ದು, ಅದರಲ್ಲಿ 3,106 ರೈತರು ತಮ್ಮ ಹಕ್ಕು ಚಲಾಯಿಸಿದರು. ಶೇ 69ರಷ್ಟು ಮತದಾನವಾಗಿದೆ. ಬೆಳಿಗ್ಗೆ 9 ಗಂಟೆಯಿಂದ ಆರಂಭಗೊಂಡ ಮತದಾನ ಸಂಜೆ 4 ಗಂಟೆ 20 ನಿಮಿಷದವರೆಗೆ ನಡೆಯಿತು. ಬೆಳಿಗ್ಗೆ 11 ಗಂಟೆವರೆಗೂ ನೀರಸವಾಗಿದ್ದ ಮತದಾನ ಮಧ್ಯಾಹ್ನ 12 ಗಂಟೆ ನಂತರ ಬಿರುಸು ಪಡೆದು ಕೊಂಡಿತು. ರೈತರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದ ದೃಶ್ಯ ಕಂಡು ಬಂತು.</p>.<p>ಪ್ರತಿ ಬಾರಿ ಅವಿರೋಧ ಆಯ್ಕೆ ನಡೆಯುತ್ತಿದ್ದ ಕಾರ್ಖಾನೆಗೆ ಈ ಬಾರಿ ಬಿಜೆಪಿ ಬೆಂಬಲಿಗರು ಸ್ಪರ್ಧೆ ಮಾಡಿದ್ದರಿಂದ ಚುನಾವಣಾ ಕಣ ರಂಗೇರಿತು. ಹೀಗಾಗಿ, 8 ಸ್ಥಾನಗಳಲ್ಲಿ ಅಮರಕುಮಾರ ಖಂಡ್ರೆ ಪೆನಾಲ್ ಮತ್ತು ಬಿಜೆಪಿ ಬೆಂಬಲಿತರ ನಡುವೆ ನೇರ ಸ್ಪರ್ಧೆ ಏರ್ಪಟ್ಟಿತು. ಒಟ್ಟು 13 ನಿರ್ದೇಶಕರ ಸ್ಥಾನಗಳ ಪೈಕಿ 5 ಸ್ಥಾನಗಳು ಅವಿರೋಧ ಆಯ್ಕೆಗೊಂಡ ಹಿನ್ನೆಲೆಯಲ್ಲಿ 8 ಸ್ಥಾನಗಳಿಗೆ ಚುನಾವಣೆ ನಡೆಯಿತು. ಸಾಮಾನ್ಯ ಕ್ಷೇತ್ರ 5, ಸಾಮಾನ್ಯ ಮಹಿಳಾ ಕ್ಷೇತ್ರ 2 ಮತ್ತು ಪರಿಶಿಷ್ಟ ಜಾತಿ 1 ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 15 ಅಭ್ಯರ್ಥಿಗಳು ಕಣದಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾಲ್ಕಿ</strong>: ತಾಲ್ಲೂಕಿನ ಹುಣಜಿ(ಎ) ಸಮೀಪದ ಮಹಾತ್ಮ ಗಾಂಧಿ ಸಹಕಾರ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ಸೋಮವಾರ ಶಾಂತಿಯುತವಾಗಿ ಮತದಾನ ನಡೆಯಿತು.</p>.<p>ಒಟ್ಟು 4,452 ರೈತ ಮತದಾರರಿದ್ದು, ಅದರಲ್ಲಿ 3,106 ರೈತರು ತಮ್ಮ ಹಕ್ಕು ಚಲಾಯಿಸಿದರು. ಶೇ 69ರಷ್ಟು ಮತದಾನವಾಗಿದೆ. ಬೆಳಿಗ್ಗೆ 9 ಗಂಟೆಯಿಂದ ಆರಂಭಗೊಂಡ ಮತದಾನ ಸಂಜೆ 4 ಗಂಟೆ 20 ನಿಮಿಷದವರೆಗೆ ನಡೆಯಿತು. ಬೆಳಿಗ್ಗೆ 11 ಗಂಟೆವರೆಗೂ ನೀರಸವಾಗಿದ್ದ ಮತದಾನ ಮಧ್ಯಾಹ್ನ 12 ಗಂಟೆ ನಂತರ ಬಿರುಸು ಪಡೆದು ಕೊಂಡಿತು. ರೈತರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದ ದೃಶ್ಯ ಕಂಡು ಬಂತು.</p>.<p>ಪ್ರತಿ ಬಾರಿ ಅವಿರೋಧ ಆಯ್ಕೆ ನಡೆಯುತ್ತಿದ್ದ ಕಾರ್ಖಾನೆಗೆ ಈ ಬಾರಿ ಬಿಜೆಪಿ ಬೆಂಬಲಿಗರು ಸ್ಪರ್ಧೆ ಮಾಡಿದ್ದರಿಂದ ಚುನಾವಣಾ ಕಣ ರಂಗೇರಿತು. ಹೀಗಾಗಿ, 8 ಸ್ಥಾನಗಳಲ್ಲಿ ಅಮರಕುಮಾರ ಖಂಡ್ರೆ ಪೆನಾಲ್ ಮತ್ತು ಬಿಜೆಪಿ ಬೆಂಬಲಿತರ ನಡುವೆ ನೇರ ಸ್ಪರ್ಧೆ ಏರ್ಪಟ್ಟಿತು. ಒಟ್ಟು 13 ನಿರ್ದೇಶಕರ ಸ್ಥಾನಗಳ ಪೈಕಿ 5 ಸ್ಥಾನಗಳು ಅವಿರೋಧ ಆಯ್ಕೆಗೊಂಡ ಹಿನ್ನೆಲೆಯಲ್ಲಿ 8 ಸ್ಥಾನಗಳಿಗೆ ಚುನಾವಣೆ ನಡೆಯಿತು. ಸಾಮಾನ್ಯ ಕ್ಷೇತ್ರ 5, ಸಾಮಾನ್ಯ ಮಹಿಳಾ ಕ್ಷೇತ್ರ 2 ಮತ್ತು ಪರಿಶಿಷ್ಟ ಜಾತಿ 1 ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 15 ಅಭ್ಯರ್ಥಿಗಳು ಕಣದಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>