ಖಟಕಚಿಂಚೋಳಿ: ಹೋಬಳಿಯಾದ್ಯಂತ ಕಾಡು ಹಂದಿಗಳ ಕಾಟ ವಿಪರೀತವಾಗಿದ್ದು ಶೇಂಗಾ, ಜೋಳ ಬೆಳೆದ ರೈತರು ಬೆಳೆಗಳ ರಕ್ಷಣೆಗೆ ಸೀರೆಗಳ ಬೇಲಿ, ಧ್ವನಿ ವರ್ಧಕಗಳ ಮೊರೆ ಹೋಗುತ್ತಿದ್ದಾರೆ. ಹೋಬಳಿಯ ಚಳಕಾಪುರ ವಾಡಿ, ಡಾವರಗಾಂವ್, ದಾಡಗಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಶೇಂಗಾ, ಜೋಳ ಬೆಳೆದ ರೈತರು ಕಾಡು ಹಂದಿಗಳಿಂದ ಬೆಳೆಗಳನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ.