<p><strong>ಭಾಲ್ಕಿ: </strong>ಕೃಷಿಯನ್ನು ಹೆಚ್ಚು ಲಾಭದಾಯಕವಾಗಿ ಮಾಡುವ ದೃಷ್ಟಿಯಿಂದ ಕೃಷಿ ಇಲಾಖೆ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ರೈತ ಸಂಘದ ಅಧ್ಯಕ್ಷ ಸಿದ್ರಾಮಪ್ಪ ಆಣದೂರೆ ಹೇಳಿದರು.</p>.<p>ಪಟ್ಟಣದ ಕೃಷಿ ಇಲಾಖೆ ಕಚೇರಿ ಆವರಣದಲ್ಲಿ ಕೃಷಿ ಇಲಾಖೆ ವತಿಯಿಂದ ಸೋಮವಾರ ಆಯೋಜಿಸಿದ್ದ ಸಮಗ್ರ ಕೃಷಿ ಅಭಿಯಾನ ಮಾಹಿತಿ ರಥಗಳಿಗೆ ಚಾಲನೆ ನೀಡಿ, ಮಾತನಾಡಿದರು.</p>.<p>‘ರೈತರ ಆತ್ಮಹತ್ಯೆ ತಡೆಯುವ ನಿಟ್ಟಿನಲ್ಲಿ ಮತ್ತು ರೈತರ ಆತ್ಮಸ್ಥೈರ್ಯ ಹೆಚ್ಚಿಸುವ ಸಲುವಾಗಿ ಕೃಷಿ ಇಲಾಖೆ ರೈತಪರ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ’ ಎಂದು ಹೇಳಿದರು.</p>.<p>‘ಕೃಷಿ ಅಭಿಯಾನದ ರಥ ಪ್ರತಿ ಹಳ್ಳಿಗೂ ಸಂಚರಿಸಿ ಕೃಷಿಕರಿಗೆ ಇಲಾ ಖೆಯ ಸಮಗ್ರ ಮಾಹಿತಿ ನೀಡಬೇಕು. ಕಡಿಮೆ ಖರ್ಚಿನಲ್ಲಿ ಮಾಡಬಹುದಾದ ಬೇಸಾಯ ಪದ್ಧತಿ, ಬಿತ್ತನೆ ಬೀಜ, ಸಸಿ ಮಡಿಗಳನ್ನು ಹದಗೊಳಿಸುವಿಕೆ, ಭೂಮಿಗೆ ನೀಡಬೇಕಾದ ಸಾರಜನಕ, ರಂಜಕ, ಕೊಟ್ಟಿಗೆ ಗೊಬ್ಬರ ಎಷ್ಟು ಪ್ರಮಾಣದಲ್ಲಿ ನೀಡಬೇಕು ಎನ್ನುವುದು ರೈತರಿಗೆ ತಿಳಿಸಬೇಕು’ ಎಂದರು.</p>.<p>ಸಹಾಯಕ ಕೃಷಿ ನಿರ್ದೇಶಕ ರಮೇಶ ಮಸ್ಕಲೆ ಮಾತನಾಡಿ, ‘ರೈತರು ಪ್ರಸ್ತುತ ಆಧುನಿಕ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಂಡು ಹೆಚ್ಚೆಚ್ಚು ಉತ್ಪಾದನೆ ಮಾಡಿ ಬೇಸಾಯವನ್ನು ಲಾಭದತ್ತ ಕೊಂಡೊಯ್ಯಲು ಈ ರಥ ಸಹಕಾರಿ ಆಗಲಿದೆ’ ಎಂದರು.</p>.<p>ಕಚೇರಿ ಅಧೀಕ್ಷಕ ಲಕ್ಷ್ಮಣ ಮಳ್ಳಿ, ಬಸವರಾಜ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾಲ್ಕಿ: </strong>ಕೃಷಿಯನ್ನು ಹೆಚ್ಚು ಲಾಭದಾಯಕವಾಗಿ ಮಾಡುವ ದೃಷ್ಟಿಯಿಂದ ಕೃಷಿ ಇಲಾಖೆ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ರೈತ ಸಂಘದ ಅಧ್ಯಕ್ಷ ಸಿದ್ರಾಮಪ್ಪ ಆಣದೂರೆ ಹೇಳಿದರು.</p>.<p>ಪಟ್ಟಣದ ಕೃಷಿ ಇಲಾಖೆ ಕಚೇರಿ ಆವರಣದಲ್ಲಿ ಕೃಷಿ ಇಲಾಖೆ ವತಿಯಿಂದ ಸೋಮವಾರ ಆಯೋಜಿಸಿದ್ದ ಸಮಗ್ರ ಕೃಷಿ ಅಭಿಯಾನ ಮಾಹಿತಿ ರಥಗಳಿಗೆ ಚಾಲನೆ ನೀಡಿ, ಮಾತನಾಡಿದರು.</p>.<p>‘ರೈತರ ಆತ್ಮಹತ್ಯೆ ತಡೆಯುವ ನಿಟ್ಟಿನಲ್ಲಿ ಮತ್ತು ರೈತರ ಆತ್ಮಸ್ಥೈರ್ಯ ಹೆಚ್ಚಿಸುವ ಸಲುವಾಗಿ ಕೃಷಿ ಇಲಾಖೆ ರೈತಪರ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ’ ಎಂದು ಹೇಳಿದರು.</p>.<p>‘ಕೃಷಿ ಅಭಿಯಾನದ ರಥ ಪ್ರತಿ ಹಳ್ಳಿಗೂ ಸಂಚರಿಸಿ ಕೃಷಿಕರಿಗೆ ಇಲಾ ಖೆಯ ಸಮಗ್ರ ಮಾಹಿತಿ ನೀಡಬೇಕು. ಕಡಿಮೆ ಖರ್ಚಿನಲ್ಲಿ ಮಾಡಬಹುದಾದ ಬೇಸಾಯ ಪದ್ಧತಿ, ಬಿತ್ತನೆ ಬೀಜ, ಸಸಿ ಮಡಿಗಳನ್ನು ಹದಗೊಳಿಸುವಿಕೆ, ಭೂಮಿಗೆ ನೀಡಬೇಕಾದ ಸಾರಜನಕ, ರಂಜಕ, ಕೊಟ್ಟಿಗೆ ಗೊಬ್ಬರ ಎಷ್ಟು ಪ್ರಮಾಣದಲ್ಲಿ ನೀಡಬೇಕು ಎನ್ನುವುದು ರೈತರಿಗೆ ತಿಳಿಸಬೇಕು’ ಎಂದರು.</p>.<p>ಸಹಾಯಕ ಕೃಷಿ ನಿರ್ದೇಶಕ ರಮೇಶ ಮಸ್ಕಲೆ ಮಾತನಾಡಿ, ‘ರೈತರು ಪ್ರಸ್ತುತ ಆಧುನಿಕ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಂಡು ಹೆಚ್ಚೆಚ್ಚು ಉತ್ಪಾದನೆ ಮಾಡಿ ಬೇಸಾಯವನ್ನು ಲಾಭದತ್ತ ಕೊಂಡೊಯ್ಯಲು ಈ ರಥ ಸಹಕಾರಿ ಆಗಲಿದೆ’ ಎಂದರು.</p>.<p>ಕಚೇರಿ ಅಧೀಕ್ಷಕ ಲಕ್ಷ್ಮಣ ಮಳ್ಳಿ, ಬಸವರಾಜ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>