<p><strong>ಭಾಲ್ಕಿ</strong>: ‘ಐಐಟಿಯಲ್ಲಿ ಉತ್ತಮವಾಗಿ ಅಭ್ಯಸಿಸಿ ರಾಷ್ಟ್ರದ ಪ್ರಗತಿಗೆ ಅನುಕೂಲ ವಾಗುವಂಥ ಸಂಶೋಧನೆಯನ್ನು ವಿದ್ಯಾರ್ಥಿಗಳು ಕೈಗೊಳ್ಳಬೇಕು. ಎಲ್ಲರ ಧ್ಯೇಯ ರಾಷ್ಟ್ರದ ಏಳಿಗೆಯೇ ಆಗಿರಬೇಕು’ ಎಂದು ಹಿರೇಮಠದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಹೇಳಿದರು.</p>.<p>ತಾಲ್ಲೂಕಿನ ಕರಡ್ಯಾಳದ ಶ್ರೀ ಚನ್ನಬಸವೇಶ್ವರ ಗುರುಕುಲ ವಿಜ್ಞಾನ ಪಿಯು ಕಾಲೇಜಿನಲ್ಲಿ ನಡೆದ ಐಐಟಿ ಸಾಧಕರ ಸನ್ಮಾನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>ಸಾಧನೆಗೆ ಬಡತನ, ಸಿರಿತನ ಎಂಬ ಭೇದವಿಲ್ಲ. ನಿರಂತರ ಪ್ರಯತ್ನ, ಅವಿರತ ಓದು, ಶಿಕ್ಷಕರ ಮಾರ್ಗದರ್ಶನದ ಪಾಲನೆ, ಸಮಯ ಪ್ರಜ್ಞೆ, ಪ್ರಬಲವಾದ ಇಚ್ಛೆ, ಆತ್ಮವಿಶ್ವಾಸ ಸಾಧನೆಯ ರಹಸ್ಯದ ಮಂತ್ರಗಳಾಗಿವೆ ಎಂದು ತಿಳಿಸಿದರು.</p>.<p>ಪ್ರಮುಖರಾದ ರೇಕು ನಾಯಕ್ ಮಾತನಾಡಿ,‘ಗುರುಕುಲ ಕಾಲೇಜು ಬಡ, ಪ್ರತಿಭಾನ್ವಿತ ವಿದ್ಯಾರ್ಥಿಗಳ ಪಾಲಿಗೆ ವರವಾಗಿದೆ. ಕಡಿಮೆ ಖರ್ಚಿನಲ್ಲಿ ಗುಣಾತ್ಮಕ, ಸಂಸ್ಕಾರಯುತ ಶಿಕ್ಷಣ ಲಭಿಸುತ್ತಿರುವುದು ವಿದ್ಯಾರ್ಥಿ, ಪಾಲಕರಿಗೆ ಸಂತಸವನ್ನುಂಟು ಮಾಡಿದೆ’ ಎಂದರು.</p>.<p>ಸಾಧಕ ವಿದ್ಯಾರ್ಥಿಗಳಿಗೆ ಮೈಸೂರು ಪೇಟ ತೋಡಿಸಿ ಸನ್ಮಾನಿಸಲಾಯಿತು.</p>.<p>ಪ್ರಮುಖರಾದ ಚಂದ್ರಕಾಂತ ಪಾಟೀಲ, ಶಿವಕುಮಾರ ತಮಾಸಂಗೆ, ಶಿವು ಲೋಖಂಡೆ, ಶಿವಲಿಂಗ ಕುಂಬಾರ, ಆಡಳಿತಾಧಿಕಾರಿ ಮೋಹನರೆಡ್ಡಿ, ಪ್ರಾಚಾರ್ಯ ಬಸವರಾಜ ಮೊಳಕೀರೆ, ಐಐಟಿ ಉಪನ್ಯಾಸಕರಾದ ಸದಾವಿಜಯ, ಪುರುಷೋತ್ತಮ, ನೀರಜ್, ವೆಂಕಟೇಶ್ವರಲು, ರಾಘವೇಂದ್ರ ಇದ್ದರು.</p>.<p>ಉಪ ಪ್ರಾಚಾರ್ಯ ಸಿದ್ರಾಮ ಗೊಗ್ಗಾ ನಿರೂಪಿಸಿ, ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾಲ್ಕಿ</strong>: ‘ಐಐಟಿಯಲ್ಲಿ ಉತ್ತಮವಾಗಿ ಅಭ್ಯಸಿಸಿ ರಾಷ್ಟ್ರದ ಪ್ರಗತಿಗೆ ಅನುಕೂಲ ವಾಗುವಂಥ ಸಂಶೋಧನೆಯನ್ನು ವಿದ್ಯಾರ್ಥಿಗಳು ಕೈಗೊಳ್ಳಬೇಕು. ಎಲ್ಲರ ಧ್ಯೇಯ ರಾಷ್ಟ್ರದ ಏಳಿಗೆಯೇ ಆಗಿರಬೇಕು’ ಎಂದು ಹಿರೇಮಠದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಹೇಳಿದರು.</p>.<p>ತಾಲ್ಲೂಕಿನ ಕರಡ್ಯಾಳದ ಶ್ರೀ ಚನ್ನಬಸವೇಶ್ವರ ಗುರುಕುಲ ವಿಜ್ಞಾನ ಪಿಯು ಕಾಲೇಜಿನಲ್ಲಿ ನಡೆದ ಐಐಟಿ ಸಾಧಕರ ಸನ್ಮಾನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>ಸಾಧನೆಗೆ ಬಡತನ, ಸಿರಿತನ ಎಂಬ ಭೇದವಿಲ್ಲ. ನಿರಂತರ ಪ್ರಯತ್ನ, ಅವಿರತ ಓದು, ಶಿಕ್ಷಕರ ಮಾರ್ಗದರ್ಶನದ ಪಾಲನೆ, ಸಮಯ ಪ್ರಜ್ಞೆ, ಪ್ರಬಲವಾದ ಇಚ್ಛೆ, ಆತ್ಮವಿಶ್ವಾಸ ಸಾಧನೆಯ ರಹಸ್ಯದ ಮಂತ್ರಗಳಾಗಿವೆ ಎಂದು ತಿಳಿಸಿದರು.</p>.<p>ಪ್ರಮುಖರಾದ ರೇಕು ನಾಯಕ್ ಮಾತನಾಡಿ,‘ಗುರುಕುಲ ಕಾಲೇಜು ಬಡ, ಪ್ರತಿಭಾನ್ವಿತ ವಿದ್ಯಾರ್ಥಿಗಳ ಪಾಲಿಗೆ ವರವಾಗಿದೆ. ಕಡಿಮೆ ಖರ್ಚಿನಲ್ಲಿ ಗುಣಾತ್ಮಕ, ಸಂಸ್ಕಾರಯುತ ಶಿಕ್ಷಣ ಲಭಿಸುತ್ತಿರುವುದು ವಿದ್ಯಾರ್ಥಿ, ಪಾಲಕರಿಗೆ ಸಂತಸವನ್ನುಂಟು ಮಾಡಿದೆ’ ಎಂದರು.</p>.<p>ಸಾಧಕ ವಿದ್ಯಾರ್ಥಿಗಳಿಗೆ ಮೈಸೂರು ಪೇಟ ತೋಡಿಸಿ ಸನ್ಮಾನಿಸಲಾಯಿತು.</p>.<p>ಪ್ರಮುಖರಾದ ಚಂದ್ರಕಾಂತ ಪಾಟೀಲ, ಶಿವಕುಮಾರ ತಮಾಸಂಗೆ, ಶಿವು ಲೋಖಂಡೆ, ಶಿವಲಿಂಗ ಕುಂಬಾರ, ಆಡಳಿತಾಧಿಕಾರಿ ಮೋಹನರೆಡ್ಡಿ, ಪ್ರಾಚಾರ್ಯ ಬಸವರಾಜ ಮೊಳಕೀರೆ, ಐಐಟಿ ಉಪನ್ಯಾಸಕರಾದ ಸದಾವಿಜಯ, ಪುರುಷೋತ್ತಮ, ನೀರಜ್, ವೆಂಕಟೇಶ್ವರಲು, ರಾಘವೇಂದ್ರ ಇದ್ದರು.</p>.<p>ಉಪ ಪ್ರಾಚಾರ್ಯ ಸಿದ್ರಾಮ ಗೊಗ್ಗಾ ನಿರೂಪಿಸಿ, ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>