<p>ಭಾಲ್ಕಿ: ‘ವಿದ್ಯಾರ್ಥಿಗಳು ಶ್ರದ್ಧೆಯಿಂದ ನಿರಂತರವಾಗಿ ಅಭ್ಯಾಸ ಮಾಡಿದಲ್ಲಿ ಮಹೋನ್ನತ ಸಾಧನೆ ಮಾಡಲು ಸಾಧ್ಯ’ ಎಂದು ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ಪ್ರಕಾಶ ಖಂಡ್ರೆ ಹೇಳಿದರು.</p>.<p>ಇಲ್ಲಿನ ಗುರು ಪ್ರಸನ್ನ ಜನಸೇವಾ ಮಹಿಳಾ ಸಂಸ್ಥೆಯಲ್ಲಿ ಶನಿವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಗುರು ಪ್ರಸನ್ನ ವಾಣಿಜ್ಯ ಪಿಯು ಕಾಲೇಜಿನ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ಹೆತ್ತವರ ಕನಸು ನನಸಾಗಿಸಲು ಹಾಗೂ ಭವಿಷ್ಯವನ್ನು ಉಜ್ವಲವಾಗಿ ರೂಪಿಸಿಕೊಳ್ಳಲು ಸಮಯ ಪರಿಪಾಲನೆ ಯೊಂದಿಗೆ ವಿಷಯಗಳನ್ನು ಆಳವಾಗಿ ಅಭ್ಯಸಿಸಬೇಕು ಎಂದು ತಿಳಿಸಿದರು.</p>.<p>‘ನಮ್ಮ ಕಾಲೇಜಿನ ವಿದ್ಯಾರ್ಥಿನಿ ಭಾಗ್ಯಶ್ರೀ ದಿಗಂಬರ ಪಿಯು ದ್ವಿತೀಯ ವರ್ಷದ ಪರೀಕ್ಷೆಯಲ್ಲಿ ಶೇ 92ರಷ್ಟು ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿರುವುದು ಸಂತಸದ ಸಂಗತಿ. ಎಲ್ಲ ವಿದ್ಯಾರ್ಥಿಗಳು ಚೆನ್ನಾಗಿ ಓದಿ ಎತ್ತರದ ಸಾಧನೆ ಮಾಡಬೇಕು ಎಂದು ತಿಳಿ ಹೇಳಿದರು.</p>.<p>ಆಡಳಿತಾಧಿಕಾರಿ ಬಾಲರಾಜ ಶಿವನಣಗೆ, ಪದವಿ ಕಾಲೇಜಿನ ಪ್ರಾಚಾರ್ಯ ವಿಷ್ಣು ಕೋಟೆ, ಪಿಯು ಕಾಲೇಜಿನ ಪ್ರಾಚಾರ್ಯ ರಾಜ ಮೇತ್ರಿ ಸೇರಿದಂತೆ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭಾಲ್ಕಿ: ‘ವಿದ್ಯಾರ್ಥಿಗಳು ಶ್ರದ್ಧೆಯಿಂದ ನಿರಂತರವಾಗಿ ಅಭ್ಯಾಸ ಮಾಡಿದಲ್ಲಿ ಮಹೋನ್ನತ ಸಾಧನೆ ಮಾಡಲು ಸಾಧ್ಯ’ ಎಂದು ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ಪ್ರಕಾಶ ಖಂಡ್ರೆ ಹೇಳಿದರು.</p>.<p>ಇಲ್ಲಿನ ಗುರು ಪ್ರಸನ್ನ ಜನಸೇವಾ ಮಹಿಳಾ ಸಂಸ್ಥೆಯಲ್ಲಿ ಶನಿವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಗುರು ಪ್ರಸನ್ನ ವಾಣಿಜ್ಯ ಪಿಯು ಕಾಲೇಜಿನ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ಹೆತ್ತವರ ಕನಸು ನನಸಾಗಿಸಲು ಹಾಗೂ ಭವಿಷ್ಯವನ್ನು ಉಜ್ವಲವಾಗಿ ರೂಪಿಸಿಕೊಳ್ಳಲು ಸಮಯ ಪರಿಪಾಲನೆ ಯೊಂದಿಗೆ ವಿಷಯಗಳನ್ನು ಆಳವಾಗಿ ಅಭ್ಯಸಿಸಬೇಕು ಎಂದು ತಿಳಿಸಿದರು.</p>.<p>‘ನಮ್ಮ ಕಾಲೇಜಿನ ವಿದ್ಯಾರ್ಥಿನಿ ಭಾಗ್ಯಶ್ರೀ ದಿಗಂಬರ ಪಿಯು ದ್ವಿತೀಯ ವರ್ಷದ ಪರೀಕ್ಷೆಯಲ್ಲಿ ಶೇ 92ರಷ್ಟು ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿರುವುದು ಸಂತಸದ ಸಂಗತಿ. ಎಲ್ಲ ವಿದ್ಯಾರ್ಥಿಗಳು ಚೆನ್ನಾಗಿ ಓದಿ ಎತ್ತರದ ಸಾಧನೆ ಮಾಡಬೇಕು ಎಂದು ತಿಳಿ ಹೇಳಿದರು.</p>.<p>ಆಡಳಿತಾಧಿಕಾರಿ ಬಾಲರಾಜ ಶಿವನಣಗೆ, ಪದವಿ ಕಾಲೇಜಿನ ಪ್ರಾಚಾರ್ಯ ವಿಷ್ಣು ಕೋಟೆ, ಪಿಯು ಕಾಲೇಜಿನ ಪ್ರಾಚಾರ್ಯ ರಾಜ ಮೇತ್ರಿ ಸೇರಿದಂತೆ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>