<p><strong>ಬೀದರ್</strong>: ರಾಜ್ಯ ಸರ್ಕಾರದ ವತಿಯಿಂದಲೇ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆಗೆ ಆದೇಶ ಹೊರಡಿಸಿದ್ದಕ್ಕೆ ದಕ್ಷಿಣ ಭಾರತದ ವಿವಿಧ ರಾಜ್ಯಗಳ ವೀರಶೈವ ಲಿಂಗಾಯತ ಸಮಾಜದ ಪ್ರತಿನಿಧಿಗಳು ಬೆಂಗಳೂರಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲಕುಮಾರ್ ಅವರನ್ನು ಸನ್ಮಾನಿಸಿದರು.</p>.<p>ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿ ಸದಸ್ಯ ಶಿವಯ್ಯ ಸ್ವಾಮಿ ಅವರ ನೇತೃತ್ವದಲ್ಲಿ ಶಾಲು ಹೊದಿಸಿ ಸತ್ಕರಿಸಿದರು.</p>.<p>‘ಸರ್ಕಾರದ ವತಿಯಿಂದಲೇ ರೇಣುಕಾಚಾರ್ಯರ ಜಯಂತಿ ಆಚರಿಸಬೇಕು ಎನ್ನುವುದು ಬಹುದಿನಗಳ ಬೇಡಿಕೆಯಾಗಿತ್ತು. ರಾಜ್ಯ ಸರ್ಕಾರ ಈ ಕುರಿತು ಆದೇಶ ಹೊರಡಿಸಿ ರೇಣುಕಾಚಾರ್ಯರಿಗೆ ಗೌರವ ಸಲ್ಲಿಸಿದೆ’ ಎಂದು ಶಿವಯ್ಯ ಸ್ವಾಮಿ ಹೇಳಿದರು.</p>.<p>ರಾಜ್ಯ ಸರ್ಕಾರದ ಕ್ರಮದಿಂದಾಗಿ ವೀರಶೈವ ಲಿಂಗಾಯತರಲ್ಲಿ ಸಂತಸ ಮೂಡಿದೆ. ಸರ್ಕಾರದ ವತಿಯಿಂದ ಜಯಂತಿ ಆಚರಣೆಯಿಂದ ಜಗದ್ಗುರು ರೇಣುಕಾಚಾರ್ಯರ ಸಮಾಜೋಧಾರ್ಮಿಕ ಕಾರ್ಯಗಳ ಬಗ್ಗೆ ಜನಸಾಮಾನ್ಯರಲ್ಲಿ ಇನ್ನಷ್ಟು ಅರಿವು ಮೂಡಲಿದೆ ಎಂದು ಆಶಯ ವ್ಯಕ್ತಪಡಿಸಿದರು.</p>.<p>ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ತೆಲಂಗಾಣದ ವಾರಂಗಲ್ನ ನಗರಸಭೆ ಸದಸ್ಯ ಭದ್ರಯ್ಯ ಕೋಲನಪಾಕ್, ಜಹೀರಾಬಾದ್ನ ನಾಗಯ್ಯ ಸ್ವಾಮಿ, ಬೋಧನ್ನ ಜಯಕುಮಾರ ಪುರಾನೆ, ಮಹಾರಾಷ್ಟ್ರದ ಸೊಲ್ಲಾಪುರದ ರೇಣುಕ ಹಿರೇಮಠ ಮೊದಲಾದವರು ನಿಯೋಗದಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ರಾಜ್ಯ ಸರ್ಕಾರದ ವತಿಯಿಂದಲೇ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆಗೆ ಆದೇಶ ಹೊರಡಿಸಿದ್ದಕ್ಕೆ ದಕ್ಷಿಣ ಭಾರತದ ವಿವಿಧ ರಾಜ್ಯಗಳ ವೀರಶೈವ ಲಿಂಗಾಯತ ಸಮಾಜದ ಪ್ರತಿನಿಧಿಗಳು ಬೆಂಗಳೂರಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲಕುಮಾರ್ ಅವರನ್ನು ಸನ್ಮಾನಿಸಿದರು.</p>.<p>ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿ ಸದಸ್ಯ ಶಿವಯ್ಯ ಸ್ವಾಮಿ ಅವರ ನೇತೃತ್ವದಲ್ಲಿ ಶಾಲು ಹೊದಿಸಿ ಸತ್ಕರಿಸಿದರು.</p>.<p>‘ಸರ್ಕಾರದ ವತಿಯಿಂದಲೇ ರೇಣುಕಾಚಾರ್ಯರ ಜಯಂತಿ ಆಚರಿಸಬೇಕು ಎನ್ನುವುದು ಬಹುದಿನಗಳ ಬೇಡಿಕೆಯಾಗಿತ್ತು. ರಾಜ್ಯ ಸರ್ಕಾರ ಈ ಕುರಿತು ಆದೇಶ ಹೊರಡಿಸಿ ರೇಣುಕಾಚಾರ್ಯರಿಗೆ ಗೌರವ ಸಲ್ಲಿಸಿದೆ’ ಎಂದು ಶಿವಯ್ಯ ಸ್ವಾಮಿ ಹೇಳಿದರು.</p>.<p>ರಾಜ್ಯ ಸರ್ಕಾರದ ಕ್ರಮದಿಂದಾಗಿ ವೀರಶೈವ ಲಿಂಗಾಯತರಲ್ಲಿ ಸಂತಸ ಮೂಡಿದೆ. ಸರ್ಕಾರದ ವತಿಯಿಂದ ಜಯಂತಿ ಆಚರಣೆಯಿಂದ ಜಗದ್ಗುರು ರೇಣುಕಾಚಾರ್ಯರ ಸಮಾಜೋಧಾರ್ಮಿಕ ಕಾರ್ಯಗಳ ಬಗ್ಗೆ ಜನಸಾಮಾನ್ಯರಲ್ಲಿ ಇನ್ನಷ್ಟು ಅರಿವು ಮೂಡಲಿದೆ ಎಂದು ಆಶಯ ವ್ಯಕ್ತಪಡಿಸಿದರು.</p>.<p>ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ತೆಲಂಗಾಣದ ವಾರಂಗಲ್ನ ನಗರಸಭೆ ಸದಸ್ಯ ಭದ್ರಯ್ಯ ಕೋಲನಪಾಕ್, ಜಹೀರಾಬಾದ್ನ ನಾಗಯ್ಯ ಸ್ವಾಮಿ, ಬೋಧನ್ನ ಜಯಕುಮಾರ ಪುರಾನೆ, ಮಹಾರಾಷ್ಟ್ರದ ಸೊಲ್ಲಾಪುರದ ರೇಣುಕ ಹಿರೇಮಠ ಮೊದಲಾದವರು ನಿಯೋಗದಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>