ಬಸವಾದಿ ಶರಣರ ವಚನಗಳನ್ನು ಆಧುನಿಕ ಕಾಲದಲ್ಲಿ ಜನಮನಕ್ಕೆ ತಲುಪಿಸಿದ ಕೀರ್ತಿ ಡಾ.ಹಳಕಟ್ಟಿ ಅವರಿಗೆ ಸಲ್ಲುತ್ತದೆ. ಹಳಕಟ್ಟಿ ಅವರು ಸಮರ್ಪಣಾ ಭಾವದಿಂದ ವಚನ ಸಾಹಿತ್ಯ, ಸಂಶೋಧನೆ, ಸಂಪಾದನೆ ಕೈಗೊಂಡಿದ್ದರಿಂದಲೇ ಇಂದು ನಮಗೆ ವಚನ ಸಾಹಿತ್ಯ ದೊರೆತಿದೆ. ಬಹು ಕಷ್ಟದ ಕಾಲದಲ್ಲಿ ಯಾವುದೇ ಸೌಲಭ್ಯಗಳನ್ನು ಇಲ್ಲದ ಸಮಯದಲ್ಲಿ ಹಳಕಟ್ಟಿ ಅವರು ವಚನ ಸಾಹಿತ್ಯ ಸಂರಕ್ಷಣೆಗಾಗಿ ಮಾಡಿರುವ ಸೇವೆ ಅನುಪಮವಾದದ್ದು ಎಂದು ತಿಳಿಸಿದರು.