ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಷೇಧವಿದ್ದರೂ ಸಾಮೂಹಿಕ ನಮಾಜ್: ಕಮಲನಗರದಲ್ಲಿ 24 ಜನರ ವಿರುದ್ಧ ಪ್ರಕರಣ ದಾಖಲು

Last Updated 5 ಏಪ್ರಿಲ್ 2020, 7:52 IST
ಅಕ್ಷರ ಗಾತ್ರ

ಕಮಲನಗರ (ಬೀದರ್): ಕೋವಿಡ್–19 ಸೋಂಕು ಹರಡುವಿಕೆ ತಡೆಯುವ ನಿಟ್ಟಿನಲ್ಲಿ ದೇಶದಾದ್ಯಂತ ಲಾಕ್‌ಡೌನ್ ಮಾಡಲಾಗಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸರ್ಕಾರ ಸೂಚಿಸಿದೆ. ಆದರೆ, ನಿಷೇಧಾಜ್ಞೆಯನ್ನೂ ಲೆಕ್ಕಿಸದೆ ಕಮಲನಗರದಲ್ಲಿ ಸಾಮೂಹಿಕ ನಮಾಮ್‌ ಮಾಡಿದ 24 ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಮಲನಗರ ಪಟ್ಟಣದ ಖುರೇಷಿ ಬಡಾವಣೆಯ ಸದರ್ ಪಾಶಾಮಿಯಾ ಅವರಿಗೆ ಸೇರಿದ ಕಟ್ಟಡದಲ್ಲಿ 25ಕ್ಕೂ ಅಧಿಕ ಜನರು ಸೇರಿ ಒಂದೇ ಸ್ಥಳದಲ್ಲಿ ನಮಾಜ್ ಮಾಡುತ್ತಿರುವ ಮಾಹಿತಿ ಬಂದ ನಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT