<p><strong>ಖಟಕಚಿಂಚೋಳಿ</strong>: ಸಮೀಪದ ಚಳಕಾಪುರ ವಾಡಿ ಗ್ರಾಮದ ರೈತ ಮಲ್ಲಾರಿ ಬಿರಾದಾರ ಅವರ ಹೊಲದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಫಲವತ್ತಾಗಿ ಬೆಳೆದಿದ್ದ ಮಾವಿನ ಗಿಡದ ಹಣ್ಣುಗಳು ಸಂಪೂರ್ಣವಾಗಿ ನೆಲಕ್ಕುರುಳಿವೆ. ಇದರಿಂದ ರೈತ ಮಲ್ಲಾರಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.</p>.<p>ಸದ್ಯ ಮಾವಿನ ಕಾಯಿ ಸಂಪೂರ್ಣವಾಗಿ ಹಣ್ಣಾಗುವ ಹಂತಕ್ಕೆ ತಲುಪಿತ್ತು. ಮುಂದಿನ ಹದಿನೈದು ದಿನಗಳಲ್ಲಿ ಮಾವು ತೆಗೆದು ಮಾರಾಟ ಮಾಡುತ್ತಿದ್ದೆ. ಇದರಿಂದ ಕೈ ತುಂಬಾ ಆದಾಯ ಪಡೆಯಬಹುದು ಎಂಬ ನಿರೀಕ್ಷೆಯಲ್ಲಿ ಇದ್ದೆ. ಆದರೆ ಈ ಘಟನೆ ಸಂಭವಿಸಿರುವುದರಿಂದ ನನ್ನ ಆಸೆಯ ಮೇಲೆ ತಣ್ಣೀರು ಎರಚಿದಂತಾಗಿದೆ ಎಂದು ರೈತ ಮಲ್ಲಾರಿ ಅಳಲು ತೋಡಿಕೊಂಡರು.</p>.<p>ಮಾವಿನ ಗಿಡಕ್ಕೆ ಬೆಂಕಿ ತಗುಲಿರುವುದರಿಂದ ರೈತನಿಗೆ ಅಪಾರ ಪ್ರಮಾಣದ ನಷ್ಟವಾಗಿದೆ. ಹೀಗಾಗಿ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪರಿಹಾರ ನೀಡಬೇಕು ಎಂದು ಗ್ರಾಮದ ಮುಖಂಡರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಖಟಕಚಿಂಚೋಳಿ</strong>: ಸಮೀಪದ ಚಳಕಾಪುರ ವಾಡಿ ಗ್ರಾಮದ ರೈತ ಮಲ್ಲಾರಿ ಬಿರಾದಾರ ಅವರ ಹೊಲದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಫಲವತ್ತಾಗಿ ಬೆಳೆದಿದ್ದ ಮಾವಿನ ಗಿಡದ ಹಣ್ಣುಗಳು ಸಂಪೂರ್ಣವಾಗಿ ನೆಲಕ್ಕುರುಳಿವೆ. ಇದರಿಂದ ರೈತ ಮಲ್ಲಾರಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.</p>.<p>ಸದ್ಯ ಮಾವಿನ ಕಾಯಿ ಸಂಪೂರ್ಣವಾಗಿ ಹಣ್ಣಾಗುವ ಹಂತಕ್ಕೆ ತಲುಪಿತ್ತು. ಮುಂದಿನ ಹದಿನೈದು ದಿನಗಳಲ್ಲಿ ಮಾವು ತೆಗೆದು ಮಾರಾಟ ಮಾಡುತ್ತಿದ್ದೆ. ಇದರಿಂದ ಕೈ ತುಂಬಾ ಆದಾಯ ಪಡೆಯಬಹುದು ಎಂಬ ನಿರೀಕ್ಷೆಯಲ್ಲಿ ಇದ್ದೆ. ಆದರೆ ಈ ಘಟನೆ ಸಂಭವಿಸಿರುವುದರಿಂದ ನನ್ನ ಆಸೆಯ ಮೇಲೆ ತಣ್ಣೀರು ಎರಚಿದಂತಾಗಿದೆ ಎಂದು ರೈತ ಮಲ್ಲಾರಿ ಅಳಲು ತೋಡಿಕೊಂಡರು.</p>.<p>ಮಾವಿನ ಗಿಡಕ್ಕೆ ಬೆಂಕಿ ತಗುಲಿರುವುದರಿಂದ ರೈತನಿಗೆ ಅಪಾರ ಪ್ರಮಾಣದ ನಷ್ಟವಾಗಿದೆ. ಹೀಗಾಗಿ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪರಿಹಾರ ನೀಡಬೇಕು ಎಂದು ಗ್ರಾಮದ ಮುಖಂಡರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>