ಸರ್ವೇ ನಂಬರ್ 41/2A ಜಮೀನಿನಲ್ಲಿ ಐದಾರು ಅಡಿಗಳಷ್ಟು ಎತ್ತರಕ್ಕೆ ಕಬ್ಬು ಬೆಳೆದಿತ್ತು. ಆದರೆ, ಶನಿವಾರ ಕಿಡಿಗೇಡಿಗಳಿಂದ ಸಂಪೂರ್ಣ ಸುಟ್ಟು ಹೋಗಿದ್ದು, ₹3 ಲಕ್ಷ ನಷ್ಟ ಉಂಟಾಗಿದೆ. ‘ಸರ್ಕಾರ ಪರಿಹಾರ ನೀಡುವುದರ ಜೊತೆ ಬೆಳೆಗೆ ಬೆಂಕಿ ಇಟ್ಟಿರುವ ಆರೋಪಿಗಳನ್ನು ಪತ್ತೆ ಹಚ್ಚಿ ಶಿಕ್ಷೆಗೆ ಗುರಿಪಡಿಸಬೇಕು’ ಎಂದು ರಾಘವೇಂದ್ರ ಕುಲಕರ್ಣಿ ಮನವಿ ಮಾಡಿದ್ದಾರೆ.